ತುಮಕೂರು: ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಮೂರು ತಿಂಗಳು ತುಮಕೂರು ಪೊಲೀಸರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸೋಕೆ ಇಲ್ಲಿಗೆ ಬಂದಿದ್ದೇನೆ. ರೆಡ್ ಝೋನ್ ಜಿಲ್ಲೆ, ಗ್ರೀನ್ ಜಿಲ್ಲೆ, ಎಂಬುವುದು ಈಗಿಲ್ಲ. ಮಹಾರಾಷ್ಟ್ರ, ತಮಿಳುನಾಡಿನಿಂದ ಎಲ್ಲಾ ಜಿಲ್ಲೆಗೂ ಕೊರೊನಾ ಸೋಂಕಿತರು ಬಂದಿದ್ದಾರೆ. ನನ್ನ ಪ್ರಕಾರ ಯಾವ ಜಿಲ್ಲೆಯ ಪೋಲಿಸರಿಗೆ ಸೋಂಕು ಬರುವುದಿಲ್ಲವೋ ಅದು ಗ್ರೀನ್ ಜೋನ್ ಜಿಲ್ಲೆ. ಈ ಜಿಲ್ಲೆಯ ಪೊಲೀಸರಿಗೆ ಯಾವುದೇ ಸೋಂಕು ಬಂದಿಲ್ಲ. ಚೆನ್ನಾಗಿ ಕಂಟ್ರೋಲ್ ಮಾಡಿದ್ದಾರೆ. ಜನರು ಹಾಗೂ ಪೊಲೀಸರ ಮಧ್ಯೆಯೂ ಇನ್ಫೆಕ್ಷನ್ ಕಡಿಮೆ ಮಾಡಬೇಕು ಎಂದು ಹೇಳಿದ್ದಾರೆ.

ಶಿವಮೊಗ್ಗ ಪೊಲೀಸರಿಗೆ ಸೋಂಕು ವಿಚಾರವಾಗಿ ಮಾತನಾಡಿದ ಪ್ರವೀಣ್ ಸೂದ್, ಯುವತಿಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ. ಈ ವೇಳೆ ಮಾನವೀಯ ದೃಷ್ಟಿಯಿಂದ ಇನ್ಸ್‌ಪೆಕ್ಟರ್ ತಮ್ಮ ಜೀಪಿನಲ್ಲಿ ಕೂರಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪ್ರೋಟೋಕಾಲ್ ಪ್ರಕಾರ ಅದು ತಪ್ಪು. ಆದರೆ, ಮಾನವೀಯ ದೃಷ್ಟಿಯಿಂದ ಏನು ಮಾಡ್ಬೇಕಿತ್ತು? ಕೆಲವು ಸರಿ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ ಎಂದರು.

Leave a Reply

Your email address will not be published. Required fields are marked *

You May Also Like

ನಮ್ಮದು ಬೆಂಕಿ ಆರಿಸುವ ಸಂಸ್ಕೃತಿ

ಸಮಾಜವನ್ನು ಒಡೆಯುವ ಸಂಸ್ಕೃತಿ ತಮ್ಮದಲ್ಲ. ನಾವು ಬೆಂಕಿ ಹಚ್ಚುವವರಲ್ಲ. ಹಚ್ಚಿದ ಬೆಂಕಿಯನ್ನು ಆರಿಸುವವರು ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೂರ್ಯಕಾಂತಿ ಕ್ಷೇತ್ರಕ್ಕೆ ಕೃಷಿ ಅಧಿಕಾರಿಗಳ ಭೇಟಿ ಕೀಟ ರೋಗ ನಿಯಂತ್ರಣಕ್ಕೆ ಸಲಹೆ

ಉತ್ತರಪ್ರಭ ಸುದ್ದಿನಿಡಗುಂದಿ: ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಸೂರ್ಯಕಾಂತಿ ಮತ್ತು ಮೆಕ್ಕೆಜೋಳ ಬೆಳೆಗಳಿಗೆ ಕೀಟ ಹಾಗೂ ರೋಗಗಳ…

ವಿರಾಟ್ ಕೊಹ್ಲಿ ಅನುಷ್ಕಾಗೆ ವಿಚ್ಛೇದನ ಕೊಡಬೇಕು ಎಂದವರಾರು? ಏಕೆ?

ಮುಂಬಯಿ: ಬಾಲಿವುಡ್ ಮತ್ತು ಕ್ರಿಕೆಟ್ ನಂಟು ತೀರಾ ಹಳೆಯದು. ಅದಕ್ಕೆ ಇತ್ತೀಚೆಗೆ ಮತ್ತೊಂದು ಕೊಂಡಿ ಬೆಸೆದವರು…

ಸರ್ಕಾರಗಳ ಸಾಧನೆ ಮನೆ-ಮನೆಗೆ ತಲುಪಿಸಿ- ಲಿಂಗರಾಜ ಪಾಟೀಲ್

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಮನೆ-ಮನೆಗೆ ತಲುಪಿಸುವ ಕಾರ್ಯ ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಧಾರವಾಡ ವಿಭಾಗೀಯ ಬಿಜೆಪಿ ಸಂಘಟನಾ ಪ್ರಭಾರಿ ಲಿಂಗರಾಜ್ ಪಾಟೀಲ್ ಹೇಳಿದರು.