ಲಕ್ನೋ: ಕೊರೊನಾದಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ದೂರದೂರುಗಳಿಂದ ಬರುವವರಿಗೆ ಕೊರೊನಾ ಕ್ವಾರಂಟೈನ್ ಭಯ ಮನೆ ಮಾಡಿದೆ.

ಈ ಮಧ್ಯೆ ದೂರದೂರುಗಳಿಂದ ಬರುವಂತಹ ಜನ ಕ್ವಾರಂಟೈನ್ ಮಾಡುತ್ತಾರೆಂಬ ಭಯದಿಂದ ಎಸ್ಕೇಪ್ ಆಗುತ್ತಿರುವುದನ್ನು ಕೇಳಿದ್ದೇವೆ. ಆದರೆ ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕೊರೊನಾದಿಂದ ಮೃತಪಟ್ಟಿರಬಹುದೆಂಬ ಶಂಕೆಯಿಂದ ಶವವನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಕುಟುಂಬವೊಂದು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ನಾಲ್ಕು ದಿನಗಳ ಹಿಂದೆ 35 ವರ್ಷದ ಕಾರ್ಮಿಕನೊಬ್ಬ ಮುಂಬಯಿನಿಂದ ಉತ್ತರಪ್ರದೇಶದ ಪ್ರತಾಪಘರ್ ಗೆ ಮರಳಿ ಬಂದಿದ್ದ. ಆದರೆ, ಆತ ಅನಾರೋಗ್ಯದಿಂದ ಬಳಲುತ್ತಿದ್ದ. ವೈದ್ಯರು ಆತನನ್ನು ಮನೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ, ದಾರಿ ಮಧ್ಯೆ ಆತ ಸಾವನ್ನಪ್ಪಿದ್ದಾನೆ. ಆದರೆ, ಕುಟುಂಬಸ್ಥರು ಕೊರೊನಾದಿಂದಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಮೃತ ದೇಹವನ್ನು ದಾರಿ ಮಧ್ಯೆಯೇ ಬಿಟ್ಟು ಹೋಗಿದ್ದಾರೆ.

ಇತ್ತ ದಾರಿಯಲ್ಲಿರುವ ಶವಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಹಾಗೂ ಆರೋಗ್ಯಾಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿತು. ತನಿಖೆ ನಡೆಸಿದ ಪೊಲೀಸರಿಗೆ ಕೊರೊನಾ ಭಯದಿಂದಲೇ ಶವ ಬಿಸಾಕಿರುವುದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಎಪಿಎಂಸಿ ಚೆಕ್‌ಪೊಸ್ಟ್ ನಲ್ಲಿ ಹಣ ವಸೂಲಿ ದಂಧೆ?

ಎಪಿಎಂಸಿ ಚೆಕ್‌ಪೊಸ್ಟ್ನಲ್ಲಿ ವಾಹನ ತಪಾಸಣೆ ಹೆಸರಿನಲ್ಲಿ ಭಾರಿ ಪ್ರಮಾಣದಲ್ಲಿ ಹಣ ವಸೂಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ನದಿಗಳ ಜಲಮಾರ್ಗದಲ್ಲಿ ಸರಕು ಸಾಗಾಟಕ್ಕೆ ನಿರ್ಬಂಧ

ರಾಜ್ಯದ 5 ಜಲಮಾರ್ಗಗಳಲ್ಲಿ ಸರಕು ಸಾಗಾಣಿಕೆ ಮಾಡುವ ಮಹತ್ವದ ಯೋಜನೆಗೆ ಆರ್ಥಿಕವಾಗಿ ಲಾಭದಾಯಕವಾಗಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಹಿನ್ನಡೆಯಾಗಿದೆ.

ದೇಹ ಮಾರುವುದಕ್ಕಾಗಿ ಕರೆ ತಂದಿದ್ದ ಅಪ್ರಾಪ್ತೆಯರನ್ನು ರಕ್ಷಿಸಿದ ಪೊಲೀಸರು!

ಜೈಪುರ : ಅಪ್ರಾಪ್ತ ಬಾಲಕಿಯರನ್ನು ದೇಹ ವ್ಯಾಪಾರಕ್ಕೆಂದು ಕರೆ ತಂದಿದ್ದ ತಂಡದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 21 ಅಪ್ರಾಪ್ತೆಯರನ್ನು ರಕ್ಷಿಸಿದ್ದಾರೆ.

ಚನ್ನೈನಲ್ಲಿ ಕೊರೋನಾ ಕಾಟ

ತಮಿಳುನಾಡಿನಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಬರೋಬ್ಬರಿ 771 ಹೊಸ ಪ್ರಕರಣಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 4829ಕ್ಕೆ ಏರಿಕೆಯಾಗಿದೆ.