ಲಕ್ನೋ: ಕೊರೊನಾದಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ದೂರದೂರುಗಳಿಂದ ಬರುವವರಿಗೆ ಕೊರೊನಾ ಕ್ವಾರಂಟೈನ್ ಭಯ ಮನೆ ಮಾಡಿದೆ.

ಈ ಮಧ್ಯೆ ದೂರದೂರುಗಳಿಂದ ಬರುವಂತಹ ಜನ ಕ್ವಾರಂಟೈನ್ ಮಾಡುತ್ತಾರೆಂಬ ಭಯದಿಂದ ಎಸ್ಕೇಪ್ ಆಗುತ್ತಿರುವುದನ್ನು ಕೇಳಿದ್ದೇವೆ. ಆದರೆ ಉತ್ತರ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕೊರೊನಾದಿಂದ ಮೃತಪಟ್ಟಿರಬಹುದೆಂಬ ಶಂಕೆಯಿಂದ ಶವವನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಕುಟುಂಬವೊಂದು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.

ಕಳೆದ ನಾಲ್ಕು ದಿನಗಳ ಹಿಂದೆ 35 ವರ್ಷದ ಕಾರ್ಮಿಕನೊಬ್ಬ ಮುಂಬಯಿನಿಂದ ಉತ್ತರಪ್ರದೇಶದ ಪ್ರತಾಪಘರ್ ಗೆ ಮರಳಿ ಬಂದಿದ್ದ. ಆದರೆ, ಆತ ಅನಾರೋಗ್ಯದಿಂದ ಬಳಲುತ್ತಿದ್ದ. ವೈದ್ಯರು ಆತನನ್ನು ಮನೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಆದರೆ, ದಾರಿ ಮಧ್ಯೆ ಆತ ಸಾವನ್ನಪ್ಪಿದ್ದಾನೆ. ಆದರೆ, ಕುಟುಂಬಸ್ಥರು ಕೊರೊನಾದಿಂದಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಮೃತ ದೇಹವನ್ನು ದಾರಿ ಮಧ್ಯೆಯೇ ಬಿಟ್ಟು ಹೋಗಿದ್ದಾರೆ.

ಇತ್ತ ದಾರಿಯಲ್ಲಿರುವ ಶವಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಹಾಗೂ ಆರೋಗ್ಯಾಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿತು. ತನಿಖೆ ನಡೆಸಿದ ಪೊಲೀಸರಿಗೆ ಕೊರೊನಾ ಭಯದಿಂದಲೇ ಶವ ಬಿಸಾಕಿರುವುದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 378 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 378 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾದಂತಾಗಿದೆ.

ಗದಗ ಜಿಲ್ಲೆಯಲ್ಲಿ ಊರೂರು ವ್ಯಾಪಿಸುತ್ತಿರುವ ವೈರಸ್: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶುಕ್ರವಾರ ದಿ. 17 ರಂದು 60(ಹೆಲ್ಥ್ ಬುಲೆಟಿನ್ ನಲ್ಲಿ 59) ಜನರಿಗೆ ಕೊವಿಡ್-19…

ನೊಂದವರ ನೆರವಿಗೆ ದಾಸೋಹ ಕಾರ್ಯವಾಗಬೇಕು: ತೋಂಟದ ಸಿದ್ಧರಾಮಶ್ರೀಗಳು

ನಮ್ಮ ಭಾರತ ದೇಶದ ಸಂಸ್ಕಾರ ಸಂಸ್ಕೃತಿಯೇ ವೈರಸ್ ಕಾಟ ಕಡಿಮೆಯಾಗಲು ಕಾರಣವಾಗಿದೆ. ಆದರೆ ಇಂದು ಕಲಿತವರಿಂದ ಕೆಲ ಆಚರಣೆ ಗಾಳಿಗೆ ತೂರಲಾಗಿದೆ. ಹೀಗಾಗಿ ವೈರಸ್ ಕಾಟದಿಂದ ಸಾಕಷ್ಟು ಜನರು ಸಂಕಷ್ಟು ಎದುರಿಸುವಂತಾಗಿದೆ.

ರಾಜ್ಯಸಭಾ ಚುನಾವಣೆ: ಸಂಘ ನಿಷ್ಟರಿಗೆ ಮಣೆ ಕಮಲದಲ್ಲಿ ಅಸಂತೋಷ..!

ಬೆಂಗಳೂರು: ಇತ್ತಿಚೆಗಷ್ಟೆ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆಗೆ ಕಳಿಸಬೇಕು ಎಂದು…