ಕನಕಗಿರಿ: ತಂದೆ ತಾಯಿಯೇ ದೇವರು ಎಂದು ಪೂಜಿಸುವ ಈ ಕಾಲದಲ್ಲಿ ಇಲ್ಲೋಬ್ಬ ಪಾಪಿ ಮಗನೊಬ್ಬ  ತನ್ನ ಹೆತ್ತವರನ್ನೇ ಕಬ್ಬಿಣದ ರಾಡ್​​ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದ 9ನೇ ವಾರ್ಡ್​ನಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ರಮೇಶ್ ಮಡಿವಾಳರ (26) ಪೋಷಕರನ್ನು ಹತ್ಯೆ ಮಾಡಿದ ಆರೋಪಿ. ಅಕ್ಕಮ್ಮ (46) ಹಾಗೂ ಗಿರಿಯಪ್ಪ (56) ಮೃತರು. ರಮೇಶ್​​ನ ಪತ್ನಿಯನ್ನು ಮನೆಗೆ ಕರೆತರುವ ವಿಚಾರಕ್ಕೆ ಆರೋಪಿ ಹಾಗೂ ತಂದೆ- ತಾಯಿ ನಡುವೆ ಗಲಾಟೆಯಾಗಿದೆ. ಜಗಳ ತಾರಕಕ್ಕೇರಿದ್ದು, ರಾಡ್​​ನಿಂದ ಪೋಷಕರ ಮೇಲೆ ಹಲ್ಲೆ ಮಾಡಿದ್ದಾನೆ. ತಾಯಿ ಅಕ್ಕಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ, ತಂದೆ ಗಿರಿಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. 

ಸ್ಥಳಕ್ಕೆ ಕನಕಗಿರಿ ಪೊಲೀಸರು ಹಾಗೂ ಸಿಪಿಐ ಸುರೇಶ್ ತಳವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ವರ್ತಮಾನ, ಇತಿಹಾಸ ಯಡಿಯೂರಪ್ಪರನ್ನು ಕ್ಷಮಿಸಲಾರದು: ಸಿದ್ದು

ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.

ನಿಜಾಮುದ್ಧೀನ್ ಪ್ರಕರಣ – 34 ರಾಷ್ಟ್ರಗಳ 376 ಜನರ ಮೇಲೆ ಪ್ರಕರಣ!

ನವದೆಹಲಿ: ನಗರದ ನಿಜಾಮುದ್ಧೀನ್ ಮರ್ಕಜ್ ನಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಂಡಿದ್ದ 34 ರಾಷ್ಟ್ರಗಳ 376 ವಿದೇಶಿ…

ಮೇ.25 ರಿಂದ ವಿಮಾನಯಾನ ಸೇವೆ ಆರಂಭ

ನವದೆಹಲಿ: ಲಾಕ್ಡೌನ್ ನಿಂದ ಸ್ಥಗಿತಗೊಂಡಿದ್ದ ನಾಗರಿಕ ವಿಮಾನಯಾನ ಸೇವೆ ಮೇ.25 ರಿಂದ ಮತ್ತೆ ಆರಂಭವಾಗಲಿದೆ. ದೇಶೀಯ…

ತಮ್ಮ ತಪ್ಪುಗಳನ್ನು ಮರೆಮಾಚಲು ಜನರ ಮುಂದೆ ಮೋದಿ ಬಂದಿದ್ದಾರೆ – ಸಿದ್ದರಾಮಯ್ಯ!

ಬೆಂಗಳೂರು : ಇಂದು ಸಂಜೆ ದೇಶ ಉದ್ಧೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.