ಕನಕಗಿರಿ: ತಂದೆ ತಾಯಿಯೇ ದೇವರು ಎಂದು ಪೂಜಿಸುವ ಈ ಕಾಲದಲ್ಲಿ ಇಲ್ಲೋಬ್ಬ ಪಾಪಿ ಮಗನೊಬ್ಬ  ತನ್ನ ಹೆತ್ತವರನ್ನೇ ಕಬ್ಬಿಣದ ರಾಡ್​​ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದ 9ನೇ ವಾರ್ಡ್​ನಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ರಮೇಶ್ ಮಡಿವಾಳರ (26) ಪೋಷಕರನ್ನು ಹತ್ಯೆ ಮಾಡಿದ ಆರೋಪಿ. ಅಕ್ಕಮ್ಮ (46) ಹಾಗೂ ಗಿರಿಯಪ್ಪ (56) ಮೃತರು. ರಮೇಶ್​​ನ ಪತ್ನಿಯನ್ನು ಮನೆಗೆ ಕರೆತರುವ ವಿಚಾರಕ್ಕೆ ಆರೋಪಿ ಹಾಗೂ ತಂದೆ- ತಾಯಿ ನಡುವೆ ಗಲಾಟೆಯಾಗಿದೆ. ಜಗಳ ತಾರಕಕ್ಕೇರಿದ್ದು, ರಾಡ್​​ನಿಂದ ಪೋಷಕರ ಮೇಲೆ ಹಲ್ಲೆ ಮಾಡಿದ್ದಾನೆ. ತಾಯಿ ಅಕ್ಕಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ, ತಂದೆ ಗಿರಿಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. 

ಸ್ಥಳಕ್ಕೆ ಕನಕಗಿರಿ ಪೊಲೀಸರು ಹಾಗೂ ಸಿಪಿಐ ಸುರೇಶ್ ತಳವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋರ್ಟ್ ಸೂಚನೆ ಪಾಲಿಸದಿದ್ದರೆ ಶಿಕ್ಷೆ!

ಕೊರೊನಾ ವೈರಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ಮೇಲ್ವಿಚಾರಣ ಸಮಿತಿ ನೀಡಿರುವ ಸಲಹೆ ಮತ್ತು ಸೂಚನೆಗಳನ್ನು ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಕೋರ್ಟ್‌ ಸಿಬಂದಿಗೆ ಹೈಕೋರ್ಟ್‌ ಎಚ್ಚರಿಕೆ ನೀಡಿದೆ.

ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್

ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.

ಲಕ್ಷ್ಮೇಶ್ವರ ತಾಲೂಕಿನ ವಿವಿದೆಡೆ ತಾಪಂ ಇಓ ಅವರಿಂದ ಲಸಿಕಾಕರಣದ ಮೇಲ್ವೀಚಾರಣೆ

ಕೋವಿಡ್ ಲಸಿಕೆ ಪಡೆದ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿ ಸುರಕ್ಷಿತವಾಗಿದ್ದು, ಗ್ರಾಮೀಣ ಭಾಗದ ಜನರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ಹೇಳಿದರು.

ಜಿಲ್ಲಾ ನ್ಯಾಯಾದೀಶನ ವಜಾಕ್ಕೆ ಒತ್ತಾಯಿಸಿ ಫೆ.1ರಂದು ಬಂಜಾರ ಸಮಾಜದಿಂದ ಪ್ರತಿಭಟನೆ

ವರದಿ: ವಿಠಲ ಕೆಳೂತ್ ಮಸ್ಕಿ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಭಾವಚಿತ್ರಕ್ಕೆ ಅಪಮಾನ…