ಕನಕಗಿರಿ: ತಂದೆ ತಾಯಿಯೇ ದೇವರು ಎಂದು ಪೂಜಿಸುವ ಈ ಕಾಲದಲ್ಲಿ ಇಲ್ಲೋಬ್ಬ ಪಾಪಿ ಮಗನೊಬ್ಬ  ತನ್ನ ಹೆತ್ತವರನ್ನೇ ಕಬ್ಬಿಣದ ರಾಡ್​​ನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದ 9ನೇ ವಾರ್ಡ್​ನಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ರಮೇಶ್ ಮಡಿವಾಳರ (26) ಪೋಷಕರನ್ನು ಹತ್ಯೆ ಮಾಡಿದ ಆರೋಪಿ. ಅಕ್ಕಮ್ಮ (46) ಹಾಗೂ ಗಿರಿಯಪ್ಪ (56) ಮೃತರು. ರಮೇಶ್​​ನ ಪತ್ನಿಯನ್ನು ಮನೆಗೆ ಕರೆತರುವ ವಿಚಾರಕ್ಕೆ ಆರೋಪಿ ಹಾಗೂ ತಂದೆ- ತಾಯಿ ನಡುವೆ ಗಲಾಟೆಯಾಗಿದೆ. ಜಗಳ ತಾರಕಕ್ಕೇರಿದ್ದು, ರಾಡ್​​ನಿಂದ ಪೋಷಕರ ಮೇಲೆ ಹಲ್ಲೆ ಮಾಡಿದ್ದಾನೆ. ತಾಯಿ ಅಕ್ಕಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ, ತಂದೆ ಗಿರಿಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. 

ಸ್ಥಳಕ್ಕೆ ಕನಕಗಿರಿ ಪೊಲೀಸರು ಹಾಗೂ ಸಿಪಿಐ ಸುರೇಶ್ ತಳವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತರ ಸಾಲ ಮನ್ನಾ ಮಾಡಿದ ಸರ್ಕಾರ

ಬ್ಯಾಂಕುಗಳಲ್ಲಿ ಬಾಕಿ ಉಳಿದ 57,229 ರೈತರ 295 ಕೋಟಿ ರೂ. ಸಾಲವನ್ನು ಸರ್ಕಾರ ಮನ್ನಾ ಮಾಡಿದೆ.

ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ರ್ಯಾಲಿ ಪ್ರತಿಭಟನೆ.

ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರರ್ಕಾರ, ಸುಳ್ಳು ಆಶ್ವಾಸನೆ ನೀಡುವದರ ಮೂಲಕ ಅಧಿಕಾರವನ್ನು ಪಡೆದುಕೊಂಡ ಮೇಲೆ ಚುನಾವಣೆಯ ಸಂಧರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಸದ್ಯಕ್ಕಿಲ್ಲ

ಅವಧಿ ಪೂರ್ಣಗೊಳ್ಳುವ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಸಬೇಕಿದ್ದ ಚುನಾವಣೆಯನ್ನು ಸದ್ಯಕ್ಕೆ ನಡೆಸದಿರುವ ಬಗ್ಗೆ ಚುನಾವಣಾ ಆಯೋಗ ಆದೇಶಿಸಿದೆ.

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…