ಬಳ್ಳಾರಿ:ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ. ಕೆಲವು ಹೆಚ್ಚುವರಿ ನೌಕರರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ಇನ್ನು ಲಾಕ್ ಡೌನ್ ನಿಂದ ಸಾರಿಗೆ ಇಲಾಖೆಗೆ 1,800 ಕೋಟಿ ರೂ. ನಷ್ಟದಲ್ಲಿದೆ ಎಂದು ತಿಳಿಸಿದರು. ಈ ಮೂಲಕ ಕಳೆದೆರೆಡು ದಿನಗಳಿಂದ ಸಾರಿಗೆ ನೌಕರರಲ್ಲಿ ಮನೆ ಮಾಡಿದ್ದ ಆತಂಕ ಕೊನೆಗೂ ನಿವಾರಣೆಯಾಗಿದೆ.

ಇತ್ತಿಚೆಗಷ್ಟೆ ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿ ಅಂಜುಮ್ ಫರ್ವೇಜ್ ನಷ್ಟದಲ್ಲಿರುವ ಸಾರಿಗೆ ಇಲಾಖೆ ಚೇತರಿಸಿಕೊಳ್ಳುವ ದೃಷ್ಟಿಯಿಂದ ಸರ್ಕಾರಕ್ಕೆ ಕೆಲವು ಶಿಫಾರಸ್ಸುಗಳನ್ನು ಮಾಡಿದ್ದರು ಎನ್ನಲಾಗಿದೆ. ಅವರು ಶಿಫಾರಸ್ಸು ಮಾಡಿದ ಅಂಶಗಳು ಸಂಪೂರ್ಣ ಸಿಬ್ಬಂಧಿ ವಿರೋಧಿಯಾಗಿದ್ದವು ಎಂಬ ಆರೋಪವೂ ಕೇಳಿ ಬಂದಿತ್ತು.

ಸಾರಿಗೆ ನೌಕರರ ಸಮಸ್ಯೆಗಳ ಕುರಿತು ಉತ್ತರಪ್ರಭ ಬೆಳಕು ಚೆಲ್ಲಿತ್ತು. ಆದರೆ ಕೊನೆಗೂ ಶಿಫಾರಸ್ಸಿನ ವಿಚಾರವನ್ನು ಪ್ರಾಸ್ತಾಪಿಸದೇ ವಂದಂತಿ ಎಂದು ಹೇಳುವ ಮೂಲಕ ಸಿಬ್ಬಂಧಿಗಳ ಆತಂಕಕ್ಕೆ ಸಾರಿಗೆ ಸಚಿವರು ತೆರೆ ಎಳೆದಿದ್ದಾರೆ. ಏನೇ ಆಗಲಿ ಕೊನೆಗೂ ಸಾರಿಗೆ ಸಚಿವರಿಂದ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿತಲ್ಲ ಎನ್ನುವ ಸಮಾಧಾನ ಸಿಬ್ಬಂಧಿಗಳಲ್ಲಿ ಮೂಡಿದಂತಾಗಿದೆ.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ಇನ್ನು ಲಾಕ್ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ನೋಡಿಕೊಂಡು ಈ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಬಸ್ ಬ್ರೇಕ್ ಫೇಲ್ : ಸಮಯ ಪ್ರಜ್ಞೆ ಮೆರೆದ ಚಾಲಕ

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಹತ್ತಿರ ಘಟನೆ ನಡೆದಿದೆ.

ಎಟಿಎಂ ಕಳೆದ್ರೆ ಚಿಂತಿಸದಿರಿ, ನೀವು ಮಾಡಬೇಕಾಗಿದ್ದು ಏನು ಗೊತ್ತಾ?

ಅದೆಷ್ಟೋ ಜನ ಎಟಿಎಂ ಕಾರ್ಡ್ಗಳನ್ನು ಕಳೆದುಕೊಂಡು ಪರಿತಪಿಸಿದ್ದುಂಟು. ಮಾನಸಿಕ ನೆಮ್ಮದಿ ಕಳೆದುಕೊಂಡು ಇನ್ನಿಲ್ಲದೇ ಚಿಂತಿಸಿದ್ದುಂಟು. ಆದ್ರೆ ಇದೀಗ ಎಟಿಎಂ ಕಾರ್ಡ್ ಕಳೆದೊಯ್ತು ಅಂತ ಚಿಂತಿಸುವ ಅವಶ್ಯಕತೆ ಇಲ್ಲ. ನಿಮ್ಮ ಚಿಂತೆಗೊಂದು ಪರಿಹಾರ ಇಲ್ಲಿದೆ.