ಬಳ್ಳಾರಿ:ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ. ಕೆಲವು ಹೆಚ್ಚುವರಿ ನೌಕರರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ಇನ್ನು ಲಾಕ್ ಡೌನ್ ನಿಂದ ಸಾರಿಗೆ ಇಲಾಖೆಗೆ 1,800 ಕೋಟಿ ರೂ. ನಷ್ಟದಲ್ಲಿದೆ ಎಂದು ತಿಳಿಸಿದರು. ಈ ಮೂಲಕ ಕಳೆದೆರೆಡು ದಿನಗಳಿಂದ ಸಾರಿಗೆ ನೌಕರರಲ್ಲಿ ಮನೆ ಮಾಡಿದ್ದ ಆತಂಕ ಕೊನೆಗೂ ನಿವಾರಣೆಯಾಗಿದೆ.

ಇತ್ತಿಚೆಗಷ್ಟೆ ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿ ಅಂಜುಮ್ ಫರ್ವೇಜ್ ನಷ್ಟದಲ್ಲಿರುವ ಸಾರಿಗೆ ಇಲಾಖೆ ಚೇತರಿಸಿಕೊಳ್ಳುವ ದೃಷ್ಟಿಯಿಂದ ಸರ್ಕಾರಕ್ಕೆ ಕೆಲವು ಶಿಫಾರಸ್ಸುಗಳನ್ನು ಮಾಡಿದ್ದರು ಎನ್ನಲಾಗಿದೆ. ಅವರು ಶಿಫಾರಸ್ಸು ಮಾಡಿದ ಅಂಶಗಳು ಸಂಪೂರ್ಣ ಸಿಬ್ಬಂಧಿ ವಿರೋಧಿಯಾಗಿದ್ದವು ಎಂಬ ಆರೋಪವೂ ಕೇಳಿ ಬಂದಿತ್ತು.

ಸಾರಿಗೆ ನೌಕರರ ಸಮಸ್ಯೆಗಳ ಕುರಿತು ಉತ್ತರಪ್ರಭ ಬೆಳಕು ಚೆಲ್ಲಿತ್ತು. ಆದರೆ ಕೊನೆಗೂ ಶಿಫಾರಸ್ಸಿನ ವಿಚಾರವನ್ನು ಪ್ರಾಸ್ತಾಪಿಸದೇ ವಂದಂತಿ ಎಂದು ಹೇಳುವ ಮೂಲಕ ಸಿಬ್ಬಂಧಿಗಳ ಆತಂಕಕ್ಕೆ ಸಾರಿಗೆ ಸಚಿವರು ತೆರೆ ಎಳೆದಿದ್ದಾರೆ. ಏನೇ ಆಗಲಿ ಕೊನೆಗೂ ಸಾರಿಗೆ ಸಚಿವರಿಂದ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿತಲ್ಲ ಎನ್ನುವ ಸಮಾಧಾನ ಸಿಬ್ಬಂಧಿಗಳಲ್ಲಿ ಮೂಡಿದಂತಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ!

ಬೀದರ್: ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.ಇಲ್ಲಿಯ…

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಸ್ನಾನ ಗೃಹದಲ್ಲಿ ಬಿದ್ದ ಕಾರಣ ಗಾಯಗೊಂಡಿದ್ದು, ಆಸ್ಪತ್ರೆಗೆ…

GTTC ಸಂಸ್ಥೆ ಧಾರವಾಡದಲ್ಲಿ ಯೋಗ ದಿನಾಚರಣೆ

ಉತ್ತರಪ್ರಭಧಾರವಾಡ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ರಾಯಾಪುರ ಧಾರವಾಡದಲ್ಲಿ 8 ನೇ ಅಂತಾರಾಷ್ಟ್ರೀಯ ಯೋಗ…

ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.