ಬಳ್ಳಾರಿ:ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ. ಕೆಲವು ಹೆಚ್ಚುವರಿ ನೌಕರರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ಇನ್ನು ಲಾಕ್ ಡೌನ್ ನಿಂದ ಸಾರಿಗೆ ಇಲಾಖೆಗೆ 1,800 ಕೋಟಿ ರೂ. ನಷ್ಟದಲ್ಲಿದೆ ಎಂದು ತಿಳಿಸಿದರು. ಈ ಮೂಲಕ ಕಳೆದೆರೆಡು ದಿನಗಳಿಂದ ಸಾರಿಗೆ ನೌಕರರಲ್ಲಿ ಮನೆ ಮಾಡಿದ್ದ ಆತಂಕ ಕೊನೆಗೂ ನಿವಾರಣೆಯಾಗಿದೆ.

ಇತ್ತಿಚೆಗಷ್ಟೆ ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿ ಅಂಜುಮ್ ಫರ್ವೇಜ್ ನಷ್ಟದಲ್ಲಿರುವ ಸಾರಿಗೆ ಇಲಾಖೆ ಚೇತರಿಸಿಕೊಳ್ಳುವ ದೃಷ್ಟಿಯಿಂದ ಸರ್ಕಾರಕ್ಕೆ ಕೆಲವು ಶಿಫಾರಸ್ಸುಗಳನ್ನು ಮಾಡಿದ್ದರು ಎನ್ನಲಾಗಿದೆ. ಅವರು ಶಿಫಾರಸ್ಸು ಮಾಡಿದ ಅಂಶಗಳು ಸಂಪೂರ್ಣ ಸಿಬ್ಬಂಧಿ ವಿರೋಧಿಯಾಗಿದ್ದವು ಎಂಬ ಆರೋಪವೂ ಕೇಳಿ ಬಂದಿತ್ತು.

ಸಾರಿಗೆ ನೌಕರರ ಸಮಸ್ಯೆಗಳ ಕುರಿತು ಉತ್ತರಪ್ರಭ ಬೆಳಕು ಚೆಲ್ಲಿತ್ತು. ಆದರೆ ಕೊನೆಗೂ ಶಿಫಾರಸ್ಸಿನ ವಿಚಾರವನ್ನು ಪ್ರಾಸ್ತಾಪಿಸದೇ ವಂದಂತಿ ಎಂದು ಹೇಳುವ ಮೂಲಕ ಸಿಬ್ಬಂಧಿಗಳ ಆತಂಕಕ್ಕೆ ಸಾರಿಗೆ ಸಚಿವರು ತೆರೆ ಎಳೆದಿದ್ದಾರೆ. ಏನೇ ಆಗಲಿ ಕೊನೆಗೂ ಸಾರಿಗೆ ಸಚಿವರಿಂದ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿತಲ್ಲ ಎನ್ನುವ ಸಮಾಧಾನ ಸಿಬ್ಬಂಧಿಗಳಲ್ಲಿ ಮೂಡಿದಂತಾಗಿದೆ.

Leave a Reply

Your email address will not be published. Required fields are marked *

You May Also Like

ಭಾರಿ ಕುತೂಹಲ ಕೆರಳಿಸಿದ 35ನೇ ವಾರ್ಡನ ಮತದಾನ

ಗದಗ: ಗದಗ ಬೆಟಗೇರಿ ನಗರಸಭೆ ಮತದಾನ ಪ್ರಕ್ರಿಯೆ ಇಂದು ಸಾಯಂಕಾಲ ಮುಕ್ತಾಯ ವಾಗಿದೆ.ನಗರಸಭೆಯ 35 ವಾರ್ಡಗಳ…

ಶಿಘ್ರವೇ ನೇಕಾರರಿಗೆ ಸಹಾಯಧನ ನೀಡಿ

ನೇಕಾರರಿಗೆ ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವ ಬಂಧು ವಿದ್ಯುತ್ ಮಗ್ಗಗಳ ನೇಕಾರರ ಸಂಘದ ಕಾರ್ಯಕರ್ತು ಪ್ರತಿಭಟನೆ ನಡೆಸಿದರು. ಉಪ ನಿರ್ದೇಶಕರ ಕಚೇರಿ ಎದುರು ಸರ್ಕಾರದ ವಿರುದ್ಧ ಪ್ರತಿಭಟಿಸಿ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಕಳ್ಳಬಟ್ಟಿ ಸಾರಾಯಿ ಮಾರಾಟ ಆರೋಪ ಮಲ್ಲಸಮುದ್ರ ಬಳಿ ಓರ್ವನ ಬಂಧನ

ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡು ಕಳ್ಳಭಟ್ಟಿ ಮಾರುತ್ತಿದ್ದ ಆರೋಪಿ ಬಂಧಿಸಿದ್ದಾರೆ.

ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ಮದುವೆ : ಕೋವಿಡ್ ನಿಯಮಕ್ಕೆ ಡೋಂಟ್ ಕೇರ್..!!

ಹರಪನಹಳ್ಳಿ: ಕೊರೊನಾ ಹಿನ್ನೆಲೆ ಲಾಕ್ ಡೌನ್ ಸಡಿಲಿಸಿದರೂ ಸಾಕಷ್ಟು ಕಟ್ಟುನಿಟ್ಟಿನ ನಿಯಮ ಸರ್ಕಾರ ಸೂಚಿಸಿದೆ. ಆದರೆ…