ಬಳ್ಳಾರಿ:ಸಾರಿಗೆ ಇಲಾಖೆ ನೌಕರರನ್ನು ಕೆಲಸದಿಂದ ತೆಗೆದುಹಾಕುವುದಿಲ್ಲ. ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ ಎನ್ನುವ ವದಂತಿ ಹಬ್ಬಿದೆ. ಅಂತಹ ಯಾವುದೇ ಪ್ರಸ್ತಾಪ ಇಲ್ಲ. ಕೆಲವು ಹೆಚ್ಚುವರಿ ನೌಕರರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ಇನ್ನು ಲಾಕ್ ಡೌನ್ ನಿಂದ ಸಾರಿಗೆ ಇಲಾಖೆಗೆ 1,800 ಕೋಟಿ ರೂ. ನಷ್ಟದಲ್ಲಿದೆ ಎಂದು ತಿಳಿಸಿದರು. ಈ ಮೂಲಕ ಕಳೆದೆರೆಡು ದಿನಗಳಿಂದ ಸಾರಿಗೆ ನೌಕರರಲ್ಲಿ ಮನೆ ಮಾಡಿದ್ದ ಆತಂಕ ಕೊನೆಗೂ ನಿವಾರಣೆಯಾಗಿದೆ.

ಇತ್ತಿಚೆಗಷ್ಟೆ ಸಾರಿಗೆ ಇಲಾಖೆ ಮುಖ್ಯ ಕಾರ್ಯದರ್ಶಿ ಅಂಜುಮ್ ಫರ್ವೇಜ್ ನಷ್ಟದಲ್ಲಿರುವ ಸಾರಿಗೆ ಇಲಾಖೆ ಚೇತರಿಸಿಕೊಳ್ಳುವ ದೃಷ್ಟಿಯಿಂದ ಸರ್ಕಾರಕ್ಕೆ ಕೆಲವು ಶಿಫಾರಸ್ಸುಗಳನ್ನು ಮಾಡಿದ್ದರು ಎನ್ನಲಾಗಿದೆ. ಅವರು ಶಿಫಾರಸ್ಸು ಮಾಡಿದ ಅಂಶಗಳು ಸಂಪೂರ್ಣ ಸಿಬ್ಬಂಧಿ ವಿರೋಧಿಯಾಗಿದ್ದವು ಎಂಬ ಆರೋಪವೂ ಕೇಳಿ ಬಂದಿತ್ತು.

ಸಾರಿಗೆ ನೌಕರರ ಸಮಸ್ಯೆಗಳ ಕುರಿತು ಉತ್ತರಪ್ರಭ ಬೆಳಕು ಚೆಲ್ಲಿತ್ತು. ಆದರೆ ಕೊನೆಗೂ ಶಿಫಾರಸ್ಸಿನ ವಿಚಾರವನ್ನು ಪ್ರಾಸ್ತಾಪಿಸದೇ ವಂದಂತಿ ಎಂದು ಹೇಳುವ ಮೂಲಕ ಸಿಬ್ಬಂಧಿಗಳ ಆತಂಕಕ್ಕೆ ಸಾರಿಗೆ ಸಚಿವರು ತೆರೆ ಎಳೆದಿದ್ದಾರೆ. ಏನೇ ಆಗಲಿ ಕೊನೆಗೂ ಸಾರಿಗೆ ಸಚಿವರಿಂದ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿತಲ್ಲ ಎನ್ನುವ ಸಮಾಧಾನ ಸಿಬ್ಬಂಧಿಗಳಲ್ಲಿ ಮೂಡಿದಂತಾಗಿದೆ.

Leave a Reply

Your email address will not be published. Required fields are marked *

You May Also Like

ಸುರೇಶ ಬಳಗಾನೂರ್ ಗೆ ರಾಜ್ಯ ಪತ್ರಿಕೋದ್ಯಮ ರತ್ನಪ್ರಶಸ್ತಿ

ಉತ್ತರಪ್ರಭ ಸುದ್ದಿ ಮಸ್ಕಿ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಮಾಡಿದ…

ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ!

ಬೀದರ್: ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.ಇಲ್ಲಿಯ…

ಆಮಿಷದ ಆಡಿಯೋ, ಪೊಲೀಸ್, ಕೋರ್ಟ್. ರೆಸಾರ್ಟ್ : ರಾಡಿಯೆದ್ದಿರುವ ರಾಜಸ್ತಾನ ರಾಜಕೀಯ

ಬರುವ ಮಂಗಳವಾರ ಸಾಯಂಕಾಲ 5.30ರವರೆಗೂ ಅರ್ಜಿದಾರರ (ಸಚಿನ್ ಪೈಲಟ್ ಬಣದ ಶಾಸಕರು) ಮೇಲೆ ಯಾವುದೇ ಕ್ರಮ ಕೈಗೊಳ್ಳದಂತೆ ರಾಜಸ್ತಾನ ಹೈಕೋರ್ಟ್ ವಿಭಾಗೀಯ ಪೀಠ ವಿಧಾನಸಭೆಯ ಸ್ಪೀಕರ್ ಗೆ ಸೂಚಿಸಿದೆ.

ದೆಹಲಿಯಲ್ಲಿ ಸಮುದಾಯಕ್ಕೆ ಹಬ್ಬಿದ ಸೋಂಕು – ಸಭೆ!

ನವದೆಹಲಿ : ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ…