ಮುಂಡರಗಿ: ಕೊರೊನಾದ ಈ ಸಂಕಷ್ಟದಲ್ಲಿ ಗದಗ ಜಿಲ್ಲೆಯ ಮುಂಡರಗಿ ಪುರಸಭೆ ಜನರಿಗೆ ಗಾಯದ ಮೇಲೆ ಬರೆ ಎಳೆದಿದೆ. ಇದರಿಂದ ಮುಂಡರಗಿ ಜನರಿಗೆ ನೀರಿನ ಕರ ದುಬಾರಿಯಾಗುತ್ತಿದೆ. ಈಗಾಗಲೇ ವರ್ಷಕ್ಕೆ 950 ರೂ ನೀರಿನ ಕರವನ್ನು ಪುರಸಭೆ ನಿಗದಿ ಮಾಡಿತ್ತು. ಆದರೆ ಇದೀಗ ಏಕಾಏಕಿ 1550 ರೂ, ಏಕಾಏಕಿ ಹೆಚ್ಚಿಗೆ ಮಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಉದ್ಭವವಾಗಿದೆ.
ಪುರಸಭೆಯ ಈ ಧೋರಣೆ ವಿರೋಧಿಸಿ ಇಂದು ಕನ್ನಡ ಕ್ರಾಂತಿ ಸೇನೆ ವತಿಯಿಂದ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈಗಾಗಲೇ ಆರ್ಥಿಕವಾಗಿ ಜನಸಾಮಾನ್ಯರು ಸಂಕಷ್ಟದಲ್ಲಿರುವಾಗ ನೀರಿನ ಕರ ಹೆಚ್ಚಿಗೆ ಮಾಡಿದ್ದರಿಂದ ಜನರಿಗೆ ತೀವ್ರ ತೊಂದರೆಯಾಗಲಿದೆ. ಹೀಗಾಗಿ ಈ ಧೋರಣೆ ಕೈಬಿಡಬೇಕು ಎಂದು ಕನ್ನಡ ಕ್ರಾಂತಿ ಸೇನೆ ಅಧ್ಯಕ್ಷ ಮಂಜು ಮುಧೋಳ್ ಒತ್ತಾಯಿಸಿದರು.