ಗದಗ: ಮುಂಬೈನಲ್ಲಿದ್ದ ಜನರು ಇಂದು ಮುಂಬೈ-ಗದಗ ಎಕ್ಸಪ್ರೆಸ್ ರೈಲಿನ ಮೂಲಕ ಗದಗ ನಗರಕ್ಕೆ ಆಗಮಿಸಿದರು. ಇದರಲ್ಲಿ 124 ಜನರು ರೈಲಿನ ಮೂಲಕ ನಗರಕ್ಕೆ ಆಗಮಿಸಿದರು. ದೇಶದಲ್ಲಿ ಅತೀ ಹೆಚ್ಚು ಸೋಂಕಿತರು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದ್ದರಿಂದ ಮುಖ್ಯವಾಗಿ ಈಗಾಗಲೇ ಮಹಾರಾಷ್ಟ್ರದಿಂದ ಬಂದಿರುವ ವಲಸಿಗರಲ್ಲೆ ಹೆಚ್ಚು ಕೊರೊನಾ ಸೋಂಕು ಪತ್ತೆಯಾಗಿರುವುದರಿಂದ ರೈಲು ನಿಲ್ದಾಣದಲ್ಲಿ ಹೆಚ್ಚು ನಿಗಾವಹಿಸಲಾಗಿತ್ತು.

ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವೈದ್ಯರು ಥರ್ಮಲ್ ಸ್ಕ್ಯಾನಿಂಗ್ ಮೂಲಕ ತಪಾಸಣೆ ನಡೆಸಿದರು. ನಂತರ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು.

ಮುಂಬೈನಿಂದ ಜನ ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಸ್ವತಃ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಜರಿದ್ದರು. ಬಂದ ಜನರಿಗೆ ಎರಡು ಕೌಂಟರ್ ನಲ್ಲಿ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿತ್ತು. ಸಿಪಿಐ ಬಿ.ಎ.ಬಿರಾದಾರ ನೇತೃತ್ವದಲ್ಲಿ 25 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. 17 ಜನ ರೈಲ್ವೇ ಪೊಲೀಸ್ ಹಾಗೂ 10 ಆರ್ಪಿಎಫ್ ಪೊಲೀಸರನ್ನು ನಿಯೋಜಿಸಲಾಗಿತ್ತು.

ಎಸ್ಪಿ ಯತೀಶ್ , ಎಸಿ ರಾಯಪ್ಪ, ತಹಶಿಲ್ದಾರ ಶ್ರೀನಿವಾಸ್ ಮೂರ್ತಿ, ಉಪ ತಹಶಿಲ್ದಾರ ಸಂಜೀವ್ ಸಿಂಪರ್  ಇದ್ದರು.

Leave a Reply

Your email address will not be published. Required fields are marked *

You May Also Like

ನಾಳೆ ಗದಗ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರಪ್ರಭ ಸುದ್ದಿಗದಗ: ಜಿಲ್ಲೆಯಲ್ಲಿ ಶುಕ್ರವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶನಿವಾರ ಸಹ ಮಳೆ ಮುಂದುವರಿಯುವದಾಗಿ ಹವಾಮಾನ ಇಲಾಖೆ…

ಆಲಮಟ್ಟಿಯಲ್ಲಿ ಪುಟ್ಟ ಮಕ್ಕಳ ಸಸ್ಯ ಸಂಭ್ರಮ

ಗುಲಾಬಚಂದ ಜಾಧವಆಲಮಟ್ಟಿ: ಮೊಗ್ಗಿನ ಎಳೆ ಮನಗಳಲ್ಲಿ ಸಸ್ಯ ಸಂಭ್ರಮ ಮೊಳಗಿತ್ತು. ಅಮಿತೋತ್ಸಾಹದ ಅಲೆಯಲ್ಲಿ ಹಸಿರೀಕರಣದ ಕಾಯಕಕ್ಕೆ…

ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ

ಫೆ.24 ರಿಂದ ಆಚೆಗೆ ತನ್ನ ಪ್ಲೇ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದಾಗಿ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ಈಗಾಗಲೇ ತಿಳಿಸಿದೆ.

ಬಾರ್ ಅಂಗಡಿಗಳನ್ನು ಬಂದ್ ಮಾಡಿಸಿದ ಮಹಿಳೆಯರು

ಹೆಣ್ಮಕ್ಕಳೇ ಸ್ಟ್ರಾಂಗೂ ಗುರೂ..! ಅನ್ನೋದ್ರಿಲ್ಲ ಡೌಟೇ ಇಲ್ಲ. ಮದ್ಯ ಮಾರಾಟದ ದಿನವೇ ಕುಡುಕರ ಕಿಕ್ ಇಳಿಸುವ ಮೂಲಕ ವನಿತೆಯರು ಇದಕ್ಸಿಕೆ ಉದಾಹರಣೆಯಾಗಿದ್ದಾರೆ.