ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.
ಈ ಹಿಂದಿನ ಅವಧಿಯ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಬಹಳಷ್ಟು ಪ್ರಭಾವಿಯಾಗಿದ್ದ ಮುರಗೇಶ್ ನಿರಾಣಿ ಅವರು ಸಚಿವ ಸ್ಥಾನ ಸಿಗಲಿಲ್ಲ ಎನ್ನುವ ಅತೃಪ್ತಿಯಲ್ಲಿದ್ದಾರೆ ಎನ್ನಲಾಗಿದೆ. ಆದರೆ ಇದೀಗ ಅತೃಪ್ತ ಶಾಸಕ ಪಡೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಮುರಗೇಶ್ ನಿರಾಣಿ ಪರ ಸಂಸದ ಜಿ.ಎಂ.ಸಿದ್ದೇಶ್ ಬ್ಯಾಟ್ ಬೀಸಿದ್ದು ವಿಶೇಷ.
ನಡತೆಯಲ್ಲಿ ಅಳಿಯ- ಮಾವ ಆಗುವ ನಿರಾಣಿ ಹಾಗೂ ಸಿದ್ದೇಶ್ ಅವರು ಒಬ್ಬರು ಶಾಸಕರಾದರೆ ಮತ್ತೊಬ್ಬರು ಸಂಸದರು. ಆದರೆ ಈ ಎಲ್ಲ ಬೆಳವಣಿಗೆಗಳ ಮದ್ಯೆ ಇಂದು ಸಂಸದ ಸಿದ್ದೇಶ್ ಅಳಿಯ ನಿರಾಣಿ ಪರ ಬ್ಯಾಟ್ ಬೀಸಿದ್ದು ರಾಜಕೀಯ ಪರಿಣಿತರ ಕುತೂಹಲಕ್ಕೆ ಕಾರಣವಾಗಿದೆ.
ಸಭೆ ನಡೆದಿದ್ದರಲ್ಲಿ ನಿರಾಣಿ ಪಾತ್ರ ಏನೂ ಇಲ್ಲ, ಮೂರು ವರ್ಷ ಬಿಎಸ್ ವೈ ಸಿಎಂ ಆಗಿರುತ್ತಾರೆ. ಹುಡುಗರ ರೀತಿ ಓಡಾಡಿ ಬಿಎಸ್ ವೈ ಕೆಲಸ ಮಾಡುತ್ತಿದ್ದಾರೆ. ಬಿಎಸ್ ವೈ ನಮ್ಮೆಲ್ಲರ ಪ್ರಶ್ನಾತೀತ ನಾಯಕರು. ಕೆಲವರಿಗೆ ಮಂತ್ರಿ ಮಾಡಿಲ್ಲ ಎನ್ನುವ ಅಸಮಧಾನ ಇರಬಹುದು. ಕೆಲ ಹಿರಿಯರಿಗೆ ಮಂತ್ರಿ ಆಗಬೇಕು ಎಂಬ ಆಸೆ ಇದೆ. ಕೊರೊನಾ ಹೋದ ಮೇಲೆ ಮಂತ್ರಿ ಮಂಡಲ ವಿಸ್ತರಣೆ ಮಾಡುತ್ತೇವೆ ಯಾರಿಗೂ ಅನ್ಯಾಯ ಆಗೋದಿಲ್ಲ ಅಲ್ಲಿಯವರೆಗೆ ಶಾಂತಿಯಿಂದ ಇದ್ದರೆ ಒಳ್ಳೆಯದು ಎಂದಿದ್ದಾರೆ.
ಸಂಸದರ ಈ ಮಾತು ಸಚಿವ ಸಂಪುಟ ವಿಸ್ತರಣೆಯಲ್ಲಿ ನಿರಾಣಿ ಮಂತ್ರಿಗಿರಿ ಪಡಿತಾರಾ? ಎನ್ನುವ ಪ್ರಶ್ನೆ ಹುಟ್ಟು ಹಾಕಿದೆ.

Leave a Reply

Your email address will not be published. Required fields are marked *

You May Also Like

ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ

ನಗರದ ಜನತಾ ಶಿಕ್ಷಣ ಸಮಿತಿಯ ಬನಶಂಕರಿ ಆರ್ಟ್ಸ್, ಕಾಮರ್ಸ್ ಮತ್ತು ಎಸ್.ಕೆ.ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ ಆಯೋಜಿಸಲಾಗಿದೆ.

ಗದಗ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ

ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಜಿಲ್ಲೆಯ ಶಾಲಾ ಹಾಗೂ ಕಾಲೇಜಿನಲ್ಲಿ ನಾನಾ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರ‍್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಪಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

ಗ್ರಾಮ ಪಂಚಾಯತಿ ಚುನಾವಣೆ: ಅಭಿಪ್ರಾಯ ಸಲ್ಲಿಕೆಗೆ ಚುನಾವಣಾ ಆಯೋಗ ನಿರ್ದೇಶನ

ಪಂಚಾಯತಿ ಅವಧಿ ಮುಕ್ತಾಯಗೊಳ್ಳುವ ಮುಂಚಿತವಾಗಿ ಹೊಸದಾಗಿ ಪಂಚಾಯತಿಗಳನ್ನು ರಚಿಸಲು ಚುನಾವಣೆ ನಡೆಸಬೇಕಾಗಿರುತ್ತದೆ. ಕರ್ನಾಟಕ ಗ್ರಾಮ್ ಸ್ವರಾಜ್ ಅಧಿನಿಯಮದ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಪಂಚಾಯತಿಯ ಅವಧಿಯು ಪೂರ್ಣಗೊಳ್ಳುವುದಕ್ಕೆ ಮೊದಲು ಚುನಾವಣಾ ಪ್ರಕ್ರಿಯೇಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ.

ಕೆರೆ, ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಗದಗ: ಜಿಲ್ಲೆಯ 9 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೆರೆಗಳ ಸರ್ವೇ ಕಾರ್ಯವನ್ನು ಕೈಗೊಂಡು ರಾಜಕಾಲುವೆಗಳ…