ತಿರುವನಂತಪುರ: 9ನೇ ತರಗತಿ ವಿದ್ಯಾರ್ಥಿನಿ ಮಲಪ್ಪುರಂ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಆನ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದೇ ಇರುವ ಕಾರಣಕ್ಕೆ ತೀವ್ರವಾಗಿ ತಳಮಳಕ್ಕೀಡಾಗಿ ಇಂತಹ ಕೃತ್ಯಕ್ಕೆ ಶರಣಾಗಿದ್ದಾಳೆ ಎಂದಿದ್ದಾರೆ. ಇವರು ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಲಪ್ಪುರಂನ ಎಸ್.ಪಿ. ಅಬ್ದುಲ್ ಕರೀಮ್, ಮಳಪ್ಪುರಂನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳಿಗೆ ಆನ್ ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಇದರಿಂದ ಅಧ್ಯಯನ ನಡೆಸುವುದು ಹೇಗೆ ಎಂಬ ಆತಂಕಕ್ಕೆ ಒಳಗಾಗಿದ್ದಳು ಎಂದಿದ್ದಾರೆ. ಅಲ್ಲದೇ, ಅವಳ ಕುಟುಂಬ ಆರ್ಥಿಕವಾಗಿ ಸಬಲವಾಗಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.