ಬೆಂಗಳೂರು: ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 388 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಸದ್ಯ ಗುಣಮುಖರಾದವರನ್ನು ಹೊರತು ಪಡಿಸಿ ಸಕ್ರೀಯ ಪ್ರಕರಣಗಳು ಒಟ್ಟು 2339 ಆಗಿದೆ. ಇಂದು ಗುಣಮುಖರಾಗಿ 75 ಜನ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 1403 ಜನ ಬಿಡುಗಡೆ ಹೊಂದಿದಂತಾಗಿದೆ. ಕೊರೊನಾ ಸೋಂಕಿನಿಂದ ಒಟ್ಟು ರಾಜ್ಯದಲ್ಲಿ 52 ಜನ ಸಾವನ್ನಪ್ಪಿದ್ದಾರೆ. ಇಂದು ದೃಢಪಟ್ಟ ಸೋಂಕಿತರಲ್ಲಿ 367 ಕೇಸ್ ಗಳು ಅಂತರಾಜ್ಯ ಪ್ರಯಾಣದಿಂದ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಇಂದು ಉಡುಪಿ ಜಿಲ್ಲೆಯೊಂದರಲ್ಲೆ 150 ಪ್ರಕರಣ, ಕಲಬುರಗಿ-100 ಪ್ರಕರಣಗಳು ಪತ್ತೆಯಾಗಿದ್ದು ಆಯಾ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

  • ಬೆಂಗಳೂರು ನಗರ – 12
  • ಯಾದಗಿರಿ – 05
  • ಕಲಬುರಗಿ – 100
  • ಮಂಡ್ಯ – 04
  • ರಾಯಚೂರು – 16
  • ಉಡುಪಿ – 150
  • ಬೀದರ್- 10
  • ಬೆಳಗಾವಿ – 51
  • ದಾವಣಗೆರೆ -07
  • ವಿಜಯಪುರ-04
  • ಕೋಲಾರ-01
  • ಧಾರವಾಡ- 02
  • ಹಾವೇರಿ-01
  • ಬೆಂಗಳೂರು ಗ್ರಾಮೀಣ-03
  • ತುಮಕೂರು-02
  • ಬಾಗಲಕೊಟೆ-09
  • ಚಿಕ್ಕಬಳ್ಳಾಪೂರ – 02
  • ಹಾಸನ – 09
Leave a Reply

Your email address will not be published. Required fields are marked *

You May Also Like

ಯುವಕರಲ್ಲಿ ಆತ್ಮಸ್ಥೈರ್ಯ ಕುಗ್ಗಿಸಿದ ಬಿಜೆಪಿ : ರಾಮಕೃಷ್ಣ ದೊಡ್ಡಮನಿ

ಈಗಿನ ಯುವಕರಲ್ಲಿ ಆತ್ಮಸ್ಥೆರ್ಯ ಕುಗ್ಗಿಹೋಗಿದೆ. ಅವರಲ್ಲಿ ಆತ್ಮಸ್ಥೆರ್ಯ ತುಂಬಿದರೆ ನೀರುದ್ಯೋಗದ ಸಮಸ್ಯೆ ಬಗೆಹರಿಸಬಹುದಾಗಿತ್ತು. ಆದರೆ ಬಿಜೆಪಿಯವರು ಇವು ಯಾವುದೆ ಕೆಲಸ ಮಾಡಿಲ್ಲ ಅನೇಕ ಯುವಕರು ನೀರುದ್ಯೋಗ ಸಮಸ್ಯೆಯನ್ನು ಗಂಭೀರವಾಗಿ ಎದುರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ನರೇಗಲ್ಲ್: ರಸಪ್ರಶ್ನೆ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ರೋಣ ಶಿಕ್ಷಣ ಇಲಾಖೆ ವತಿಯಿಂದ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ, ನರೆಗಲ್ ನ ಕು.ರಕ್ಷಿತಾ ಪಾಟೀಲ ಹಾಗೂ ಕುಮಾರಿ ನಿವೇದಿತಾ ಕಿಟಗೇರಿ, ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಸಿಎಂ ಗಳಿಗೆ ಪಾಠ ಮಾಡುವುದರಿಂದ ಸೋಂಕು ನಿಯಂತ್ರಣವಾಗಲ್ಲ

ಪರದೆಯಲ್ಲಿ ಮುಖ ತೋರಿಸಿದರೆ ದೇಶದಲ್ಲಿ ಕೊರೊನಾ ಸೋಂಕು ಓಡಿಹೋಗಲ್ಲ ಎಂದು ಸಿದ್ದರಾಮಯ್ಯ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರಧಾನಿ ಮೋದ ಅವರನ್ನು ಟೀಕಿಸಿದ್ದಾರೆ.