ನವದೆಹಲಿ : ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಪ್ರದೇಶಗಳಲ್ಲಿ ಈ ಕುರಿತ ಸಂಶೋಧನೆಗಳನ್ನು ನಡೆಸಿದ್ದು, ಉತ್ತಮ ಫಲಿತಾಂಶ ಲಭಿಸುತ್ತಿದೆ. ಕೋವಿಡ್ಗೆ. ಲಸಿಕೆ ಲಭಿಸುವ ಮೊದಲು ನಾವು ಆಯುರ್ವೇದವನ್ನು ಕೋವಿಡ್ ವಿರುದ್ಧ ಹೋರಾಡಲು ಆಯುಧವಾಗಿ ನೀಡುತ್ತೇವೆ ಎಂದಿದ್ದಾರೆ.

ಪತಂಜಲಿ ಸಂಸ್ಥೆಯು 5 ಲಕ್ಷ ಉದ್ಯೋಗಗಳನ್ನು ಹೊಸದಾಗಿ ಸೃಷ್ಟಿಸಲಿದೆ. ದೇಶವು ಖಾದ್ಯ ತೈಲದ ಮೇಲೆ ಸ್ವಾವಲಂಬಿಯಾಗಲು ಸೋಯಾ, ಸೂರ್ಯಕಾಂತಿ, ಸಾಸಿವೆ ಬೆಳೆಯಲು ಉತ್ತೇಜಿಸಲಾಗುವುದು. ಉತ್ಪಾದನೆ ಹೆಚ್ಚಿಸಲು ಚಳುವಳಿಯನ್ನು ನಡೆಸುತ್ತೇವೆ. ಆದರೆ, ಮುಂದಿನ 5 ರಿಂದ 10 ವರ್ಷದಲ್ಲಿ ಇತರರನ್ನು ಅವಲಂಬಿಸಲು ನಾವು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.


Leave a Reply

Your email address will not be published. Required fields are marked *

You May Also Like

ಅಲ್ವಿದಾ ನಿಸಾರ್ ಚಾಚಾ ಎನ್ನಲು ಮನಸಾಗುತ್ತಿಲ್ಲ..!

ಅಲ್ವಿದಾ ನಿಸಾರ್ ಅಹ್ಮದ್ ಚಾಚಾ. ನಿಮ್ಮ ಪದ್ಯಗಳ ಸಂತೆಯಲ್ಲಿ ನಾವು ನಿತ್ಯ ಕಳೆದುಹೋಗುತ್ತೇವೆ. ನರಸಿಂಹರಾಜ ಕಾಲೋನಿಯ ದ್ವಾರಕಾ ಹೋಟೆಲ್ ಮುಂದೆ ನೀವು ಅಂದು ನಿಂತಿದ್ದ ಜಾಗದಲ್ಲೇ ನಿಂತಿರುತ್ತೀರಿ ಎಂದು ಭಾವಿಸುತ್ತೇನೆ. ಹೋಗಿ ಬನ್ನಿ.

ಸಿ.ಟಿ ರವಿ ಚೀಟಿ ಆಟ: ಕೊನೆಗೂ ಪಾಸಿಟಿವ್ ಅಂತೆ!

ಸಚಿವ ಸಿ.ಟಿ.ರವಿ ಎರಡು ದಿನದಿಂದ ತಮ್ಮ ಕೋರೊನಾ ಪರೀಕ್ಷೆಯ ಕುರಿತು ಟ್ವೀಟ್ ಮಾಡಿದ್ದೇ ಮಾಡಿದ್ದು. ಅವರ ಅನುಭವ ನೋಡಿದರೆ ಟೆಸ್ಟ್ ಫಲಿತಾಂಶ ‘ಪಾಸಿಟಿವ್, ನೆಗೆಟಿವ್’ ಎಂಬ ಎರಡು ಚೀಟಿಯಲ್ಲಿ ಒಂದನ್ನು ಎತ್ತಿಕೊಳ್ಳುವ ಆಟದಂತಿದೆ. ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕನ್ನಡಿಯೂ ಆಗಿದೆ.

ರಾಜ್ಯದಲ್ಲಿಂದು ಕೊರೊನಾ ಮರಣ ಮೃದಂಗ: ಒಂದೇ ದಿನಕ್ಕೆ 42 ಸಾವು, 1839 ಸೋಂಕಿತರು!

ಬೆಂಗಳೂರು: ರಾಜ್ಯದಲ್ಲಿಂದು 1839 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ದೃಢಪಟ್ಟ ಸೋಂಕಿತರಲ್ಲಿ…

ಸಿಬಿಐನ ಮಾಜಿ ನಿರ್ದೇಶಕ ನೇಣಿಗೆ ಶರಣು!

ಚಂಡೀಗಢ : ಸಿಬಿಐನ ಮಾಜಿ ನಿರ್ದೇಶಕ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.