ಬೆಂಗಳೂರು: ಕನ್ನಡಪರ ಹೋರಾಟಗಾರ, ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಬಿಜೆಪಿ ಸೇರ್ತಾರಾ..? ಹೀಗೊಂದು ಪ್ರಶ್ನೆ ಇದೀಗ ಉದ್ಭವವಾಗಿದೆ. ಇತ್ತಿಚೆಗೆ ಅವರು ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿದ ವಿಚಾರ ಇಂಥ ಹಲವು ಸಂದೇಹಗಳಿಗೆ ಎಡೆಮಾಡಿಕೊಟ್ಟಿತ್ತು.

ಆದರೆ ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್ ನಾನು ಮತ್ತು ಶ್ರೀನಿವಾಸ್ ಪ್ರಸಾದ್ 40 ವರ್ಷದ ಸ್ನೇಹಿತರು. ಹೀಗಾಗಿ ಅವರ ಅರೋಗ್ಯ ವಿಚಾರಿಸಲು ಹೋಗಿದ್ದೆ ಅಷ್ಟೇ ಎಂದಿದ್ದಾರೆ. ಆದರೆ ಇವರು ಇದೇ ವೇಳೆ ಬಿಜೆಪಿ ಪಕ್ಷ ನನಗೆ ಎಂ.ಎಲ್.ಸಿ ಮಾಡಿದರೆ ಬಿಜೆಪಿಗೆ ಶಕ್ತಿ ಮತ್ತು ಗೌರವ ಬರುತ್ತದೆ. ಇದರಿಂದ ರಾಜ್ಯದ ಜನ ಅವರನ್ನು ಮೆಚ್ಚುತ್ತಾರೆ. ನಾನು ಯಾರನ್ನು ಎಂಎಲ್ಸಿ ಮಾಡಿ ಎಂದು ಕೇಳಿಲ್ಲ. ನಾನು 5 ಭಾರಿ  ಶಾಸಕನಾಗಿದ್ದೇನೆ. ಹೀಗಾಗಿ ನನ್ನನ್ನು ಎಂಎಲ್ಸಿ ಮಾಡಿದರೆ ಬಿಜೆಪಿಗೆ ಗೌರವ ಬರುತ್ತದೆ. ಆದರೆ ಈ ವಿಚಾರ ಅವರಿಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ಹಾಗಾದರೆ ವಾಟಾಳ್ ನಾಗರಾಜ್ ಅವರ ಮಾತಿ ಒಳ ಅರ್ಥ ಏನು ಎನ್ನುವುದು ಪ್ರಶ್ನೆಗೆ ಗ್ರಾಸವಾಗಿದೆ. ವಾಟಾಳ್ ಬಿಜೆಪಿಯಿಂದ ಎಂಎಲ್ಸಿ ಆಗುವ ಇರಾದೆ ಹೊಂದಿದ್ದಾರೆಯೇ? ಎನ್ನುವ ಚರ್ಚೆಗೆ ಇವರ ಮಾತುಗಳೇ ಪುಷ್ಟಿ ನೀಡುವಂತಿವೆ.  

ಮುಂದುವರೆದು ಮಾತನಾಡಿದ ಅವರು ಎಂಎಲ್ಸಿ ಚುನಾವಣೆಗೆ ನಾನು ಸ್ಪರ್ಧೆ ಮಾಡುತ್ತೇನೆ. ಗುಲ್ಬರ್ಗ ಈಶಾನ್ಯ ಪದವೀಧರ ಕ್ಷೇತ್ರ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರದಿಂದ ಒತ್ತಾಯ ಇದೆ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ನಿರ್ಧಾರಿಸಿಲ್ಲ. ಆದರೆ ಚುನಾವಣೆ ಸ್ಪರ್ಧೆ ಮಾತ್ರ ಶತಸಿದ್ಧ ಎಂದಿದ್ದಾರೆ. ಕೊನೆಗೆ ಮೂರು ಜನ್ಮ ಕಳೆದರೂ ನಾನು ಬಿಜೆಪಿ ಸೇರಲ್ಲ ಎಂದು ಹೇಳುವ ಮೂಲಕ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಸಂಕಷ್ಟದ ಕುರಿತು ತುರ್ತು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಹೇಳಿದ್ದೇನು..?

ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ತುರ್ತು ಸಭೆ ನಡೆಸಿದರು.

ಸಿನಿಪ್ರಿಯರಿಗೆ ಸಿಹಿ ಸುದ್ದಿ; ಯೂಟ್ಯೂಬ್‌ನಲ್ಲಿ 10 ದಿನಗಳ ಜಾಗತಿಕ ಸಿನಿ ಉತ್ಸವ

ಯೂಟ್ಯೂಬ್ 10 ದಿನಗಳ ಕಾಲ ಸಿನಿ ಉತ್ಸವ ಆಯೋಜಿಸುವ ಮೂಲಕ ಸಿನಿ ಪ್ರೀಯರಿಗೆ ಸಿಹಿ ಸುದ್ದಿ ನೀಡಿರುವ ಜೊತೆಗೆ ಉತ್ಸವದ ಜಾಹಿರಾತಿನಿಂದ ಬಂದ ಲಾಭವನ್ನು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್‌ 19 ಸಾಲಿಡಾರಿಟಿ ರೆಸ್ಪಾನ್ಸ್‌ ಫಂಡ್‌ಗೆ ನೀಡುವುದಾಗಿ ಯೂಟ್ಯೂಬ್‌ ತಿಳಿಸಿದೆ.

ಶಾಶ್ವತ ಚಿರನಿದ್ರೆಗೆ ಜಾರಿದ ಚಿರು..!

ತಮಿಳುನಾಡು ಅಂದ ತಕ್ಷಣವೇ ಕಾವೇರಿ ನದಿ ವಹಿವಾಟೆ ನಮ್ಮ ಕಣ್ಣೆದುರು ಬರುತ್ತದೆ. ಕಾವೇರಿ ಸಮಸ್ಯೆ ತೀವ್ರ ಇದ್ದ 1980ರ ದಶಕದಲ್ಲಿ ಈ ಹುಡುಗ ಹುಟ್ಟುತ್ತಾನೆ. ಬೆಂಗಳೂರಿನಲ್ಲೆ ಬೆಳೆಯುವ ಈ ಹುಡುಗನ ಸಿನಿಮಾ ಹುಚ್ಚಿಗೆ ಅವರ ಮಾವ ನೀರು ಎರೆಯುತ್ತಾರೆ.