ನವದೆಹಲಿ: ಭಾರತದ ಬ್ಯಾಂಕ್ಗಲಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.
ರಾಜತಾಂತ್ರಿಕ ರಂಗದಲ್ಲಿ ಭಾರತಕ್ಕೆ ಯಶಸ್ಸು ಸಿಕ್ಕಿದ್ದು, ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವ ಬಗ್ಗೆ ಬ್ರಿಟಿಷ್ ನ್ಯಾಯಾಲಯ ಈಗಾಗಲೇ ಮುದ್ರೆ ಹಾಕಿದೆ. ವಿಜಯ್ ಮಲ್ಯ ಬ್ಯಾಂಕ್ ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅವರನ್ನು ಬಂಧಿಸಿ ವಿಶೇಷ ವಿಮಾನದಲ್ಲಿ ಕರೆ ತರಲಾಗುವುದು. ಅವರು ಹಗಲು ಹೊತ್ತಿನಲ್ಲಿ ದೇಶಕ್ಕೆ ಬಂದರೆ ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ರಾತ್ರಿ ಹೊತ್ತು ಬಂದರೆ, ಸಿಬಿಐ ಕಚೇರಿಯಲ್ಲಿ ಇರಿಸಿ, ಮಾರನೆ ದಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ವಿಜಯ್ ಮಲ್ಯ ಅವರನ್ನು ಆರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಇಡಲಾಗುತ್ತದೆ ಎಂದು ಬ್ರಿಟನ್ ನ್ಯಾಯಾಲಯಕ್ಕೆ ಭಾರತೀಯ ಸಂಸ್ಥೆಯು ತಿಳಿಸಿದೆ. ಈಗಾಗಲೇ ಬ್ಯಾಂಕ್ ಗಳು ವಿಜಯ್ ಮಲ್ಯ ಅವರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಿವೆ.

Leave a Reply

Your email address will not be published. Required fields are marked *

You May Also Like

ವಾಟ್ಸಾಪ್ ಬಳಕೆದಾರರಿಗೆ ಇನ್ಮೂಂದೆ ಹೆಚ್ಚಿನ ಬದ್ರತೆ

ವಾಟ್ಸ್ ಆಪ್ ವೆಬ್ ಮತ್ತು ಡೆಸ್ಕ್ ಟಾಪ್ ಹೊಸ ಮತ್ತು ಉತ್ತಮ ಭದ್ರತಾ ವೈಶಿಷ್ಟö್ಯಗಳೊಂದಿಗೆ ಅಪ್ ಡೇಟ್ ಆಗಲಿದೆ. ಹೊಸ ಅಪ್ ಡೇಟ್ ಪ್ರಕಾರ, ಬಳಕೆದಾರರು ಲಾಗಿನ್ ಆಗುವ ಮುನ್ನ ಡೆಸ್ಕ್ ಟಾಪ್ ಆಪ್‌ನಲ್ಲಿ ಫಿಂಗರ್ ಪ್ರಿಂಟ್ ಅಥವಾ ಫೇಸ್ ಐಡಿಯನ್ನು ದೃಢೀಕರಿಸಬೇಕಾಗುತ್ತದೆ. ಹೊಸದಾಗಿ ಪರಿಚಯಿಸಲಾದ ಈ ವೈಶಿಷ್ಟö್ಯವು ಖಾತೆಗೆ ಹೆಚ್ಚುವರಿ ರಕ್ಷಣೆ ಒದಗಿಸುತ್ತದೆ.

ರಾಜ್ಯದಲ್ಲಿ ಮಹಿಳೆಯರಿಗಿಂತಲೂ ಪುರುಷರನ್ನೇ ಹೆಚ್ಚು ಕಾಡುತ್ತಿರುವ ಕೊರೊನಾ!

ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.

ನೇಪಾಳದೊಂದಿಗೆ ನಮ್ಮದು ಗಟ್ಟಿ ಸಂಬಂಧ: ಹೈರಾಣಾಗಿರುವ ಭಾರತಕ್ಕೆ ಇದು ಇನ್ನಷ್ಟು ಮುಜುಗರ

ದೆಹಲಿ: ನೇಪಾಳದೊಂದಿಗೆ ನಮ್ಮ ಸಂಬಂಧ ಬಲಿಷ್ಠವಾಗಿದೆ ಎಂದು ಭಾರತೀಯ ಸೇನಾ ಮುಖಸ್ಥ ಎಂ.ಎಂ.ನರವಣೆ ಹೇಳಿದ್ದಾರೆ. ನಾವು…

ಕೋರೊನಾ ನಿರ್ವಹಣೆ ಸರಿಯಾಗಿದೆ, ಆತಂಕ ಬೇಡ: ಸಚಿವ ಸಿ.ಸಿ. ಪಾಟೀಲ್

ಕೋರೊನಾ ನಿವ೯ಹಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸಕಾ೯ರ ಹಾಗೂ ಜಿಲ್ಲಾಡಳಿತ ಸಮಥ೯ವಾಗಿವೆ. ಯಾವುದೆ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.