ನವದೆಹಲಿ: ಭಾರತದ ಬ್ಯಾಂಕ್ಗಲಳಿಂದ 9 ಸಾವಿರ ಕೋಟಿ ರೂ. ಸಾಲ ಪಡೆದು ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.
ರಾಜತಾಂತ್ರಿಕ ರಂಗದಲ್ಲಿ ಭಾರತಕ್ಕೆ ಯಶಸ್ಸು ಸಿಕ್ಕಿದ್ದು, ವಿಜಯ್ ಮಲ್ಯ ಅವರನ್ನು ಹಸ್ತಾಂತರಿಸುವ ಬಗ್ಗೆ ಬ್ರಿಟಿಷ್ ನ್ಯಾಯಾಲಯ ಈಗಾಗಲೇ ಮುದ್ರೆ ಹಾಕಿದೆ. ವಿಜಯ್ ಮಲ್ಯ ಬ್ಯಾಂಕ್ ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅವರನ್ನು ಬಂಧಿಸಿ ವಿಶೇಷ ವಿಮಾನದಲ್ಲಿ ಕರೆ ತರಲಾಗುವುದು. ಅವರು ಹಗಲು ಹೊತ್ತಿನಲ್ಲಿ ದೇಶಕ್ಕೆ ಬಂದರೆ ನೇರವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ರಾತ್ರಿ ಹೊತ್ತು ಬಂದರೆ, ಸಿಬಿಐ ಕಚೇರಿಯಲ್ಲಿ ಇರಿಸಿ, ಮಾರನೆ ದಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ವಿಜಯ್ ಮಲ್ಯ ಅವರನ್ನು ಆರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಇಡಲಾಗುತ್ತದೆ ಎಂದು ಬ್ರಿಟನ್ ನ್ಯಾಯಾಲಯಕ್ಕೆ ಭಾರತೀಯ ಸಂಸ್ಥೆಯು ತಿಳಿಸಿದೆ. ಈಗಾಗಲೇ ಬ್ಯಾಂಕ್ ಗಳು ವಿಜಯ್ ಮಲ್ಯ ಅವರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಿವೆ.

Leave a Reply

Your email address will not be published. Required fields are marked *

You May Also Like

ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಕೋವಿನ್ ಪೋರ್ಟಲ್ ಲಭ್ಯ

ಕೋವಿನ್ ಪೋರ್ಟಲ್ ಹಿಂದಿ ಸೇರಿದಂತೆ 10 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಯುದ್ಧಕ್ಕೆ ಸಿದ್ಧ ಎಂಬ ಸಂದೇಶವನ್ನು ಚೀನಾಕ್ಕೆ ನೀಡುತ್ತಿದೆ ಭಾರತ?

ಲಡಾಖ್‌: ಲಡಾಖ್‌ನಲ್ಲಿ ಚೀನಾ ಸೇನೆಯಿಂದ ಗಡಿ ಕ್ಯಾತೆ ಮುಂದುವರೆದ ನಡುವೆಯೇ ಭಾರತ ಯುದ್ಧಕ್ಕೆ ಸಿದ್ಧ ಎಂಬ…

ಗದಗ ಜಿಲ್ಲೆಯಲ್ಲಿಂದು ಕಂಟೈನ್ ಮೆಂಟ್ ಬೇಲಿ ಕಳಚಿಕೊಂಡ ಪ್ರದೇಶಗಳು

ಗದಗ: ಜಿಲ್ಲೆಯ ಕೋಟುಮಚಗಿ ಗ್ರಾಮದ ವಾರ್ಡ ಸಂಖ್ಯೆ 1 ಮತ್ತು 2 , ಗದಗ ತಾಲ್ಲೂಕಿನ…

ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

ದೆಹಲಿ: ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದು ಗುಜರಾತ್, ರಾಜಸ್ಥಾನ, ಛತ್ತೀಸ್ಘಾಡ್ಸೇರಿದಂತೆ 13 ಜಿಲ್ಲೆಗಳಲ್ಲಿ ನೆಲೆನಿಂತ ಹಿಂದೂ, ಸಿಖ್, ಜೈನ, ಬೌದ್ಧ ಹಾಗು ಮುಸ್ಲಿಮೇತರರಿಗೆ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಭಾರತ ಸರ್ಕಾರ ಅರ್ಜಿ ಆಹ್ವಾನಿಸಿದೆ.