ಮುಂಬಯಿ: ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ಪೈನಾಪಲ್ ನಲ್ಲಿ ಪಟಾಕಿ ಇಟ್ಟು 15 ವರ್ಷದ ಗರ್ಭಿಣಿ ಆನೆಯನ್ನು ಕೊಲೆಗೈದ ಹೀನ ಕೃತ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿ, ಆಕ್ರೋಶದಿಂದ ಈ ಮಾತುಗಳನ್ನು ಹೇಳಿದ್ದಾರೆ.

ಆನೆ ಹಾಗೂ ಅದರ ಗರ್ಭದಲ್ಲಿ ಮರಿಯಾನೆ ಇರುವ ಕಾರ್ಟೂನ್ ಫೋಟೋವನ್ನು ಟ್ವೀಟ್ ಮಾಡಿರುವ ಅವರು, ಕೇರಳದ ಘಟನೆಯ ಬಗ್ಗೆ ಕೇಳಿ ತುಂಬಾ ಆಘಾತವಾಯಿತು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು. ಅವುಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ಇಂತಹ ಹೇಡಿತನ ಕೃತ್ಯಗಳಿಗೆ ಅಂತ್ಯ ಹಾಡೋಣ ಎಂದು ಮನವಿ ಮಾಡಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸ್ಥಳೀಯರು ಬುಧವಾರ ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಗರ್ಭಿಣಿ ಆನೆಗೆ ತಿನ್ನಿಸಿದ್ದಾರೆ. ಆದರೆ, ಆನೆಯ ಬಾಯಿಯಲ್ಲಿ ಪಟಾಕಿ ಬ್ಲಾಸ್ಟ್ ಆಗಿ ಅದು ಗಂಭೀರವಾಗಿ ಗಾಯಗೊಂಡಿತ್ತು. ಈ ಗರ್ಭಿಣಿ ಆನೆ ಯಾರೊಬ್ಬರಿಗೂ ತೊಂದರೆ ನೀಡಿರಲಿಲ್ಲ. ಬಾಯಿಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ನೋವಿನಂದಿ ಆನೆ ನರಳಾಡಿ, ರಸ್ತೆಯ ತುಂಬೆಲ್ಲ ಓಡಾಡಿತ್ತು.

ಮಲಪ್ಪುರಂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಅರಣ್ಯಾಧಿಕಾರಿಯೊಬ್ಬರು ಆನೆ ನೋವಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋರಡ್ ಮಾಡಿದ್ದರು.

Leave a Reply

Your email address will not be published. Required fields are marked *

You May Also Like

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…

ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?

ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…

ಕೋವಿಡ್ ಲಸಿಕೆ 2021ರಲ್ಲಿ ಲಭ್ಯ ದಿಢೀರ್ ನಿರೀಕ್ಷೆ ಬೇಡ: ಡಬ್ಲೂಎಚ್ಒ ತಜ್ಞ

ಕೋವಿಡ್ ಲಸಿಕೆ ತಯಾರಿಸುತ್ತಿರುವ ಎಲ್ಲ ಪ್ರಯೋಗಗಳು ಈಗ ಯಶಸ್ವಿ ಹಾದಿಯಲ್ಲಿವೆ. ಸುರಕ್ಷತೆ ಮತ್ತು ರೋಗ ನಿರೋಧಕತೆ ಸೃಷ್ಟಿಸುವ ದೃಷ್ಟಿಯಲ್ಲಿ ಈ ಪ್ರಯೋಗಗಳು ಫಲ ನೀಡುತ್ತಿವೆ.