ಮುಂಬಯಿ: ಪ್ರಾಣಿಗಳೊಂದಿಗೆ ಹೇಡಿತನ ಪ್ರದರ್ಶಿಸಬೇಡಿ ಎಂದು ಕ್ರಿಕೆಟಿಗ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

ಪೈನಾಪಲ್ ನಲ್ಲಿ ಪಟಾಕಿ ಇಟ್ಟು 15 ವರ್ಷದ ಗರ್ಭಿಣಿ ಆನೆಯನ್ನು ಕೊಲೆಗೈದ ಹೀನ ಕೃತ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿ, ಆಕ್ರೋಶದಿಂದ ಈ ಮಾತುಗಳನ್ನು ಹೇಳಿದ್ದಾರೆ.

ಆನೆ ಹಾಗೂ ಅದರ ಗರ್ಭದಲ್ಲಿ ಮರಿಯಾನೆ ಇರುವ ಕಾರ್ಟೂನ್ ಫೋಟೋವನ್ನು ಟ್ವೀಟ್ ಮಾಡಿರುವ ಅವರು, ಕೇರಳದ ಘಟನೆಯ ಬಗ್ಗೆ ಕೇಳಿ ತುಂಬಾ ಆಘಾತವಾಯಿತು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು. ಅವುಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ಇಂತಹ ಹೇಡಿತನ ಕೃತ್ಯಗಳಿಗೆ ಅಂತ್ಯ ಹಾಡೋಣ ಎಂದು ಮನವಿ ಮಾಡಿದ್ದಾರೆ.

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸ್ಥಳೀಯರು ಬುಧವಾರ ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಗರ್ಭಿಣಿ ಆನೆಗೆ ತಿನ್ನಿಸಿದ್ದಾರೆ. ಆದರೆ, ಆನೆಯ ಬಾಯಿಯಲ್ಲಿ ಪಟಾಕಿ ಬ್ಲಾಸ್ಟ್ ಆಗಿ ಅದು ಗಂಭೀರವಾಗಿ ಗಾಯಗೊಂಡಿತ್ತು. ಈ ಗರ್ಭಿಣಿ ಆನೆ ಯಾರೊಬ್ಬರಿಗೂ ತೊಂದರೆ ನೀಡಿರಲಿಲ್ಲ. ಬಾಯಿಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ನೋವಿನಂದಿ ಆನೆ ನರಳಾಡಿ, ರಸ್ತೆಯ ತುಂಬೆಲ್ಲ ಓಡಾಡಿತ್ತು.

ಮಲಪ್ಪುರಂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಅರಣ್ಯಾಧಿಕಾರಿಯೊಬ್ಬರು ಆನೆ ನೋವಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋರಡ್ ಮಾಡಿದ್ದರು.

Leave a Reply

Your email address will not be published. Required fields are marked *

You May Also Like

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಉಗ್ರರಿಂದ ಬಿಜೆಪಿ ನಾಯಕನನ್ನು ರಕ್ಷಿಸಿ ಹುತಾತ್ಮನಾದ ಮೊಹಮ್ಮದ್ ಅಲ್ತಾಫ್!

ಶ್ರೀನಗರ : ಉಗ್ರರಿಂದ ಬಿಜೆಪಿ ನಾಯಕನನ್ನು ರಕ್ಷಿಸಿ ಪೊಲೀಸ್ ಪೇದೆ ಮೊಹಮ್ಮದ್ ಅಲ್ತಾಫ್ ಹುಸೈನ್ ಹುತಾತ್ಮರಾಗಿದ್ದಾರೆ.

ತಾಯಿಯನ್ನು ಜೀವಂತವಾಗಿಯೇ ಹೂತಿದ್ದ ಪಾಪಿ ಮಗ!

ಪಾಪಿ ಮಗನೊಬ್ಬ ತನ್ನ 79 ವರ್ಷದ ತನ್ನ ತಾಯಿಯನ್ನು ಜೀವಂತವಾಗಿಯೇ ಸಮಾಧಿ ಮಾಡಿರುವ ಘಟನೆ ನಡೆದಿದೆ.

ಯಾವುದೇ ಕ್ಷಣದಲ್ಲಾದರೂ ವಿಜಯ್ ಮಲ್ಯ ಅರೆಸ್ಟ್!!

ವಿದೇಶದಲ್ಲಿ ತಲೆಮರಿಸಿಕೊಂಡಿರುವ ಮದ್ಯ ಉದ್ಯಮಿ ವಿಜಯ್ ಮಲ್ಯ ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲಾಗುವುದು.