ಗದಗ: ನಗರದ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಎನ್.ಬಿ.ಎ ಮಾನ್ಯತೆ ಪಡೆದ ಮೊದಲ ಕಾಲೆಜು ಎನ್ನುವ ಹೆಗ್ಗಳಿಗೆ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ಪಾತ್ರವಾಗಿದೆ.

ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೇಕ್ಟ್ರೀಕಲ್ ವಿಭಾಗಕ್ಕೆ ಮೂರು ವರ್ಷದ ಅವಧಿಗೆ ಎನ್.ಬಿ.ಎ ಮಾನ್ಯತೆ ನೀಡಿದೆ. ಈಗಾಗಲೇ 24 ವರ್ಷ ಈ ಭಾಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಒದಗಿಸುತ್ತಿದ್ದ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿಗೆ ಎನ್.ಬಿ.ಎ ಮಾನ್ಯತೆ ದೊರೆತಿದ್ದು ಆಡಳಿತ ಮಂಡಳಿ, ಕಾಲೇಜು ಸಿಬ್ಬಂಧಿ ಹಾಗೂ ವಿದ್ಯಾರ್ಥಿಗಳ ಸಂತಸಕ್ಕೆ ಕಾರಣವಾಗಿದೆ. ಎನ್.ಬಿ.ಎ ಮಾನ್ಯತೆ ಯಿಂದ ಬೇರೆ ಬೇರೆ ಕಂಪನಿಗಳು ಕಾಲೇಜಿಗೆ ಬಂದು ಕ್ಯಾಂಪಸ್ ಆಯ್ಕೆ ಮಾಡಲಿವೆ. ಇದರಿಂದ ಉದ್ಯೋಗ ಅರಸಿ ಬೇರೆ ಕಾಲೇಜು ಅಲಿಯಬೇಕಿದ್ದ ಇಲ್ಲಿನ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಬಗ್ಗೆ ಕಾಲೇಜಿನಲ್ಲಿ ಏರ್ಪಡಿಸಿದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ್ ಮಾತನಾಡಿ ಈ ಭಾಗದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎನ್.ಬಿ.ಎ ಮಾನ್ಯತೆ ದೊರೆತಿದ್ದು ಸಂತಸದ ವಿಷಯವಾಗಿದೆ. ವಿದ್ಯಾರ್ಥಿಗಳಿಗೆ ಹಲವಾರು ಸೌಲಭ್ಯ ಹಾಗೂ ಗುಣಮಟ್ಟದ ಶಿಕ್ಷಣದ ಮೂಲಕ ರಾಜ್ಯದಲ್ಲಿ ತೋಂಟದಾರ್ಯ ಇಂಜನೀಯರಿಂಗ್ ಕಾಲೇಜು ಪ್ರಸಿದ್ಧಿ ಪಡೆದಿದೆ. ಇದೀಗ ಎನ್.ಬಿ.ಎ ಮಾನ್ಯತೆ ಯಿಂದ ಕಾಲೇಜಿಗೆ ಹೆಮ್ಮೆಯ ಗರಿ ಮೂಡಿದಂತಾಗಿದೆ ಎಂದರು.

ತೋಂಟದಾರ್ಯ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಈ ಭಾಗದ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಪಡೆದು ಉನ್ನತ ಹುದ್ದೆಯನ್ನು ಪಡೆಯಬೇಕು ಎನ್ನುವುದು ಲಿಂಗೈಕ್ಯ ಜಗದ್ಗುರು ತೋಂಟದ ಸಿದ್ಧಲಿಂಗಶ್ರೀಗಳ ಕನಸಾಗಿತ್ತು. ಅವರ ಕನಸಿನಂತೆ ಈಗಾಗಲೇ ಕಾಲೇಜಿನಲ್ಲಿ ಶಿಕ್ಷಣ ಪಡೆದ ಅನೇಕರು ರಾಜ್ಯದಲ್ಲಷ್ಟೆ ಅಲ್ಲದೇ ದೇಶ – ವಿದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಾಲೇಜಿನ ಹೆಮ್ಮೆ ಎಂದು ಹೇಳಿದರು.

ಈ ವೇಳೆ ಪ್ರಾಚಾರ್ಯ ಎಮ್.ಎಮ್.ಅವಟಿ ಹಾಗೂ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಸಿಬ್ಬಂಧಿಗಳು ಇದ್ದರು.  

1 comment
Leave a Reply

Your email address will not be published. Required fields are marked *

You May Also Like

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.

ಚಿತ್ರಕಲಾ, ಜಾನಪದ ವಿವಿ ಸಿಬ್ಬಂದಿ ವೇತನಕ್ಕೆ 11.60 ಲಕ್ಷ ಬಿಡುಗಡೆ: ವಿಪ ಸದಸ್ಯ ಸಂಕನೂರ

ರಾಜ್ಯದಲ್ಲಿ ಅಡ್ಹಾಕ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂರು ಚಿತ್ರಕಲಾ ಮಹಾವಿದ್ಯಾಲಯದ ಹಾಗೂ ಜಾನಪದ ವಿಶ್ವವಿದ್ಯಾಲಯ, ಕನ್ನಡ ವಿಶ್ವವಿದ್ಯಾಲಯ ಹಂಪಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವುಗಳ ಸಿಬ್ಬಂದಿಗಳಿಗೆ 2020-21ನೇ ಸಾಲಿನಲ್ಲಿ ನೀಡಬೇಕಾದಂತಹ ಬಾಕಿ ವೇತನಕ್ಕಾಗಿ ಆರ್ಥಿಕ ಇಲಾಖೆ 11 ಕೋಟಿ 60 ಲಕ್ಷ ಹಣ ಬಿಡುಗಡೆ ಮಾಡಿದೆ ಎಂದು ವಿಧಾನ ಪರಿಷತ್ತ ಸದಸ್ಯ ಎಸ್.ವ್ಹಿ.ಸಂಕನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರಿಂದ ಗ್ರಾಹಕರಿಗೆ ನೇರ ಮಾರಾಟಕ್ಕೆ ಕ್ರಮ ಜಿ.ಪಂ. ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ

ರೈತರು ಬೆಳೆದ ತರಕಾರಿ ಹಾಗೂ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ತೆರೆಯಲಾದ ಮಳಿಗೆಗಳ ವಿವರ ಇಲ್ಲಿದೆ ನೋಡಿ

ಚುನಾವಣೆ ಮುಂದೂಡಲು ಸರ್ಕಾರದ ಹುನ್ನಾರ: ತಾಪಂ ರದ್ದು ವಿಚಾರಕ್ಕೆ ಶಾಸಕ ಎಚ್.ಕೆ. ಪಾಟೀಲ ಕಿಡಿ

ರಾಜ್ಯ ಸರ್ಕಾರ ತಾಲೂಕು ಪಂಚಾಯತಿಯನ್ನು ರದ್ದು ಪಡಸಲು ಮುಂದಾಗಿದ್ದು, ಸAವಿಧಾನದಲ್ಲಿ ತಿದ್ದುಪಡಿಯಾಗಿದ್ದನ್ನು ರಾಜ್ಯ ಸರಕಾರ ರದ್ದು ಪಡಿಸೋಕೆ ಬರುವದಿಲ್ಲ. ಆದರೆ ಯಾವ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಮಾಜಿ ಸಚಿವ, ಶಾಸಕ ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.