ಬೆಂಗಳೂರು: ರಾಜ್ಯದಲ್ಲಿಂದು 257 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4320 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 106. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 1610 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2651 ಸಕ್ರೀಯ ಪ್ರಕರಣಗಳಿವೆ. ಇಂದು ನಾಲ್ಕು ಪ್ರಕರಣಗಳು ಮೃತ ಪಟ್ಟಿದ್ದು ಒಟ್ಟು ಮೃತರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 155 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಉಡುಪಿ – 92

ಬೆಂಗಳೂರು ನಗರ -09

ರಾಯಚೂರು – 88

ಮಂಡ್ಯ – 15

ಬೆಳಗಾವಿ -12

ಹಾಸನ -15

ದಾವಣಗೆರೆ – 13

ಚಿಕ್ಕಬಳ್ಳಾಪೂರ -02

ದಕ್ಷಿಣ ಕನ್ನಡ – 04

ವಿಜಯಪುರ – 01

ಮೈಸೂರು – 01

ಬಳ್ಳಾರಿ – 01

ಗದಗ – 02

ತುಮಕೂರು – 01

ಹಾವೇರಿ – 01

Leave a Reply

Your email address will not be published. Required fields are marked *

You May Also Like

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಗದಗನಲ್ಲಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮ ಮಾರಾಟ: ನಾಲ್ವರ ಬಂಧನ

ಗದಗ: ಈಗಾಗಲೇ ರಾಜ್ಯದಲ್ಲಿ ರೆಮಿಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಆರೋಪಗಳು ಕೇಳಿ ಬರುತ್ತಲೇ ಇವೆ. ಈ ಮದ್ಯೆ ಗದಗನಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ರೆಮಿಡಿಸಿವಿರ್ ಇಂಜಕ್ಷನ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ತಂಡವನ್ನು ಗದಗ ಸೈಬರ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

ದೇಶದಲ್ಲಿಯೂ ಭಯ ಹುಟ್ಟಿಸಲು ಪ್ರಾರಂಭಿಸಿದೆ ಕೊರೊನಾ ಸೋಂಕು!

ಕೊರೊನಾ ಯೋಧರಿಗೂ ಸೋಂಕು ತಗುಲುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ದೇಶಾದ್ಯಂತ ಇಲ್ಲಿಯವರೆಗೂ 548 ವೈದ್ಯರು, ದಾದಿಯರಿಗೆ ಕೊರೊನಾ ತಗುಲಿದ್ದು, ಅವರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ