ಗದಗ: ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಿನಲ್ಲಿ ಪತ್ತೆಯಾಗಿದೆ. P-4079 ರೋಗಿ ಗದಗನ ನಗರದ ನಿವಾಸಿಯಾಗಿದ್ದು ಇತ್ತಿಚೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. P-4079 ಮೊದಲೇ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಕ್ಯಾನ್ಸರ್ ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗಿದ್ದರು. ಬೆಂಗಳೂರು ‌ನಲ್ಲಿ ಚಿಕಿತ್ಸೆ ಪಡೆಯುವ ವೇಳೆ ಅವರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದ್ದರ ಪರಿಣಾಮ ಸೋಂಕು ಇರುವುದು ದೃಢಪಟ್ಟಿದೆ. ಇನ್ನು ಈ ರೋಗಿಯ ಹೆಂಡತಿಯನ್ನೂ ಸಹ ಬೆಂಗಳೂರು ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 37 ಕ್ಕೆ ಎರಿಕೆಯಾಗಿದ್ದು. ಇವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 17 ಜನರು ಗುಣಮಖರಾಗಿದ್ದಾರೆ 18 ಜನ ಕೊರೊನಾ ಸಕ್ರಿಯ ಪ್ರಕರಣಗಳಲ್ಲಿ 17 ಜನ ಜಿಮ್ಸ್ನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಪಾಸಿಟಿವ್ ಬಂದ ಕೇಸ್ ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ನಿರುದ್ಯೋಗಿಗಳಿಗೆ ಭತ್ಯೆ ನೀಡಲು ಒತ್ತಾಯಿಸುತ್ತೇನೆ: ಕೆ.ಆರ್.ಎಸ್ ಅಬ್ಯರ್ಥಿ ಕಾಂಬಳೆ

ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ದೊರಕುವವರೆಗೆ ನಿರುದ್ಯೋಗ ಭತ್ಯೆ ನೀಡಲು ನಾನು ಒತ್ತಾಯಿಸುತ್ತೇನೆ ಎಂದು ಪಶ್ಚಿಮ ಪದವಿಧರ ಕ್ಷೇತ್ರದ ಕೆ.ಆರ್.ಎಸ್ ಅಬ್ಯರ್ಥಿ ಶಿವರಾಜ್ ಕಾಂಬಳೆ ಹೇಳಿದರು.

ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಸ್ಥಾನ: ನಾಮಪತ್ರ ಸಲ್ಲಿಕೆ ವೇಳೆ ಹೈಡ್ರಾಮಾ..!

ಉತ್ತರಪ್ರಭ ಗದಗ : ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ಕಾವುಕಟ್ಟಿದ…

ದೇಶದ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆಯಂತೆ!

ಮಹಾಮಾರಿ ಕೊರೊನಾದಿಂದಾಗಿ ಜಿಡಿಪಿ ಕುಸಿತ ಕಂಡಿದ್ದು, ಈ ವರ್ಷದಲ್ಲಿ ಜಿಡಿಪಿ ಶೇ.0.2ಕ್ಕೆ ಕುಸಿಯಲಿದೆ ಎಂದು ಮೂಡೀಸ್ ಇನ್ವೆಸ್ಟರ್ಸ್ ಸರ್ವೀಸ್ ಅಂದಾಜು ಮಾಡಿದೆ.

ಫು.ಬಡ್ನಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

ಫು.ಬಡ್ನಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಸತತವಾಗಿ ಮೂರನೇ ಬಾರಿ ಅಧ್ಯಕ್ಷರಾಗಿ ಮಾಜಿ ಶಾಸಕ ಎಸ್.ಎನ್.ಪಾಟೀಲ ಅವರ ಪುತ್ರ ಸತೀಶಗೌಡ ಎಸ್.ಪಾಟೀಲ್ ಹಾಗು ಉಪಾಧ್ಯಕ್ಷರಾಗಿ ಲೋಹಿತಪ್ಪ ಮರಿಹೊಳಲಣ್ಣವರ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಜರುಗಿದ ಚುನಾವಣೆಯಲ್ಲಿ ಆಯ್ಕೆಯಾ ಅಧ್ಯಕ್ಷ ಉಪಾಧ್ಯಕ್ಷರನ್ನು ಸಂಘದ ಸದಸ್ಯರು ಸನ್ಮಾನಿಸಿದರು.