ಬೆಂಗಳೂರು: ಇದೇ 19 ರಂದು ಇದೇ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪ್ರಭಾಕರ ಕೋರೆ, ಹರಿಪ್ರಸಾದ್, ರಾಜೀವ್ ಗೌಡ, ಕುಪೇಂದ್ರ ರೆಡ್ಡಿ ನಿವೃತ್ತರಾಗಲಿದ್ದು ತೆರವಾದ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ತೀವ್ರ ಮಹತ್ವ ಪಡೆದುಕೊಂಡಿದೆ.

ಈಗಾಗಲೇ ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿಯೇ ಹೆಚ್ಚಿದೆ. ಇದರಲ್ಲಿ ಆಕಾಂಕ್ಷಿಗಳನ್ನು ಸಮಾಧಾನ ಪಡಿಸುವುದು ಬಿಜೆಪಿ ಪಾಲಿಗೆ ಸವಾಲಾಗಿದೆ. ಈಗಾಗಲೇ ಬಿಜೆಪಿ ಸ್ವಂತ ಸದಸ್ಯ ಬಲದ ಮೇಲೆ ಇಬ್ಬರನ್ನು ರಾಜ್ಯಸಭೆಗೆ ಕಳುಹಿಸುವ ಸಾಮರ್ಥ್ಯ ಹೊಂದಿದೆ. ಆದರೆ ಆಕಾಂಕ್ಷಿಗಳ ತೀವ್ರ ಪೈಪೋಟಿಯಿಂದ ಹೇಗಾದರೂ ಮಾಡಿ ಇನ್ನೊಬ್ಬರನ್ನು ಆಯ್ಕೆ ಮಾಡುವ ತಂತ್ರ ಹೆಣೆದಿದೆ ಎನ್ನಲಾಗಿದೆ. ಇನ್ನು ಇದೇ ಶನಿವಾರ ನಡೆಯಲಿರುವ ಕೋರ್ ಕಮೀಟಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾದ್ಯತೆ ಹೆಚ್ಚಿದೆ.

ರಾಜ್ಯಸಭೆಗೆ ಆಯ್ಕೆಯಾಗಲು 45 ಮತಗಳು ಬೇಕು. ಆದರೆ ಬಿಜೆಪಿ ಇಬ್ಬರನ್ನು ಆಯ್ಕೆ ಮಾಡಬಹುದು. ಇನ್ನು ಒಂದು ಸ್ಥಾನವನ್ನು ಹೇಗಾದರೂ ಮಾಡಿ ಪಡೆದುಕೊಳ್ಳಲೇಬೇಕು ಎಂದಾದರೇ ಬಿಜೆಪಿ ಪರ ಒಲವು ಹೊಂದಿರುವ ಅನ್ಯ ಪಕ್ಷದವರನ್ನು ಸೆಳೆಯಬೇಕಾದ ಅನಿವಾರ್ಯತೆ ಇದೆ.

ಉಳಿದ ಎರಡು ಸ್ಥಾನಗಳಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ತಲಾ ಒಂದು ಸ್ಥಾನವನ್ನು ಪಡೆಯಬಹುದು. ಆದರೆ ಈಗಿನ ಮಾಹಿತಿ ಪ್ರಕಾರ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪರ್ಧಿಸುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ದೇವೇಗೌಡರು ಸ್ಪರ್ಧಿಸಿದರೆ ಬಿಜೆಪಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವುದು ಮಾತ್ರ ಇನ್ನು ಸ್ಪಷ್ಟವಾಗಿಲ್ಲ. ಒಂದು ವೇಳೆ ದೇವೇಗೌಡರು ಸ್ಪರ್ಧೆಗೆ ನಿರಾಕರಿಸಿದರೆ ರಾಜ್ಯಸಭೆಯ ಚುನಾವಣಾ ರಾಜಕಾರಣ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದು ಮಾತ್ರ ಕುತೂಹಲ ಮೂಡಿಸಿದೆ.

ಹೀಗಾಗಿ ಶನಿವಾರ ನಡೆಯುವ ಬಿಜೆಪಿ ಕೋರ್ ಕಮೀಟಿಯ ಮೀಟಿಂಗ್ ಗೆ ಇದೀಗ ಹೆಚ್ಚು ಮಹತ್ವ ಬಂದಿದ್ದು ವಿಕೇಂಡ್ ಮೀಟಿಂಗ್ ಯಾವ ನಿರ್ಧಾರಕ್ಕೆ ಸಾಕ್ಷಿಯಾಗಲಿದೆ ಎನ್ನುವುದು ಆಕಾಂಕ್ಷಿಗಳಲ್ಲಿ ಆಸಕ್ತಿ ಮೂಡಿಸಿದೆ.

ಮಿನೂ, ಬೆಂಗಳೂರು

Leave a Reply

Your email address will not be published. Required fields are marked *

You May Also Like

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಮಾಧ್ಯಮ ಪ್ರತಿನಿಧಿ ಮೇಲೆ ತಹಶೀಲ್ದಾರ ದರ್ಪ ಖಂಡಿಸಿ ರೋಣದಲ್ಲಿ ಮನವಿ

ಗಜೇಂದ್ರಗಡ ತಹಶೀಲ್ದಾರ್ ತೋರಿದ ಪತ್ರಿಕಾ ಪ್ರತಿನಿಧಿ ಮೇಲೆ ತೋರಿದ ದರ್ಪ ಖಂಡಿಸಿ ರೋಣ ತಾಲೂಕ ಕಾರ್ಯ ನಿರತ ಪತ್ರಕರ್ತ ಸಂಘದಿಂದ ಮನವಿ ಸಲ್ಲಿಸಲಾಯಿತು.

ತೋಂಟದ ಶ್ರೀ, ಹಡೇ೯ಕರ, ಹಳಕಟ್ಟಿ ಜಗದ ಯುಗ ಪುರುಷರು- ಪಟ್ಟಣಶೆಟ್ಟರ

ವರದಿ: ಗುಲಾಬಚಂದ ಜಾಧವಆಲಮಟ್ಟಿ : ಶಾಂತ ಚಿತ್ತತೆ,ಬದ್ದತೆ ಖ್ಯಾತಿಯ ಕನ್ನಡದ ಕುಲದೇವರಾದ ಲಿಂ,ತೋಂಟದ ಸಿದ್ದಲಿಂಗ ಶ್ರೀಗಳು,ಕರುನಾಡಿನ…

ರೆಮ್ ಡೆಸಿವರ್ ಈಗ 800 ಮೆಟ್ರಿಕ್ ಟನ್ ಹೆಚ್ಚಿಸಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.