ಮುಂಡರಗಿ: ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಾವು ಬೆಳೆಸುವ ಗಿಡಿಮರಗಳು ನಮ್ಮನ್ನು ಜೀವನ ಪೂರ್ತಿ ಸಲಹುತ್ತವೆ. ಜೊತೆಗೆ ಮುಂದಿನ ಪೀಳಿಗೆಗೆ ನಾವು ಬಿಟ್ಟು ಹೋಗುವ ದೊಡ್ಡ ಕಾಣಿಕೆಯಾಗಿದೆ ಎಂದು ಪರಿಸರ ಪ್ರೇಮಿ ಪ್ರೊ.ವಿ.ಎಫ್.ಅಂಗಡಿ ಹೇಳಿದರು.

ಅವರು ಪಟ್ಟಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬರು ಒಂದೊಂದು ಗಿಡ ಬೆಳೆಸಿದರೆ ಪರಿಸರಕ್ಕೆ ಬಹುದೊಡ್ಡ ಕೊಡುಗೆ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಕಪ್ಪತ್ತಗುಡ್ಡದಲ್ಲಿ ಈಗಿರುವ ಅರಣ್ಯ ಸಂಪತ್ತನ್ನು ಉಳಿಸಿಕೊಳ್ಳುವ ಜೊತೆಗೆ ಬೆಳೆಸುವ ಕಾರ್ಯವಾಗಬೇಕು. ಜನಜಾಗೃತಿ ಹಾಗೂ ಕಾಳಜಿಯಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ಆರ್.ಎಫ್.ಓ ಪ್ರದೀಪ ಎಸ್ ಪವಾರ್ ಮಾತನಾಡಿ ಪರಿಸರ ಸಂರಕ್ಷಣೆಯಲ್ಲಿ ಯುವಕರು ತೊಡಗಿಸಿಕೊಳ್ಳಬೇಕು. ಅರಣ್ಯ ಇಲಾಖೆಗೆ ಯುವಕರ ಸಹಕಾರ ಕೂಡ ಅತ್ಯವಶ್ಯಕವಾಗಿದೆ. ಇದರಿಂದ ಪರಿಸರಕ್ಕೆ ಪೂರಕವಾದ ಇನ್ನು ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಉಪ ವಲಯ ಅರಣ್ಯಾಧಿಕಾರಿ ಎ.ಎಫ್.ಶೇಖ್, ಮೈಲಾರಪ್ಪ ಮಡಿವಾಳರ ಸೇರಿದಂತೆ ಅರಣ್ಯ ರಕ್ಷಕರು, ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ತಿಮ್ಮಾಪೂರ : ರೈತ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ರೈತ ನಾಯಕ ಪ್ರೋ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿ.ಆರ್.ನಾರಾಯಣರಡ್ಡಿ ಬಣದ ಸಂಘಕ್ಕೆ ತಾಲ್ಲೂಕಿನ ತಿಮ್ಮಾಪೂರ ಗ್ರಾಮ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಧ್ವಜಾರೋಹಣ ನೆರವೇರಿಸಿದ ಸಚಿವ ಸಿ.ಸಿ.ಪಾಟೀಲ ನೀಡಿದ ಮಾಹಿತಿ

ಇಂದು ಸ್ವಾಂತಂತ್ರ್ಯ ದಿನಾಚರಣೆ ನಿಮಿತ್ಯ, ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವ…

17 ಜನ ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡಿದ ಅಧಿಕಾರಿಗಳು!

ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಲಾರಿ ವೊವರ್ ಟೇಕ್ ಮಾಡಲು ಹೋಗಿ ಚಕ್ರಕ್ಕೆ ಸಿಲುಕಿ ಇಬ್ಬರು ಬೈಕ್ ಸವಾರರ ಸಾವು

ಉತ್ತರಪ್ರಭ ಮುಂಡರಗಿ: ಇಂದು ದಿನಾಂಕ 06/06/2022 ಬೆಳಗ್ಗೆ 10:30ರ ಸೂಮಾರಿಗೆ ಮುಂಡರಗಿ ಹಡಗಲಿ ರಸ್ತೆ  ಮದ್ಯ…