ಮುಂಡರಗಿ: ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಾವು ಬೆಳೆಸುವ ಗಿಡಿಮರಗಳು ನಮ್ಮನ್ನು ಜೀವನ ಪೂರ್ತಿ ಸಲಹುತ್ತವೆ. ಜೊತೆಗೆ ಮುಂದಿನ ಪೀಳಿಗೆಗೆ ನಾವು ಬಿಟ್ಟು ಹೋಗುವ ದೊಡ್ಡ ಕಾಣಿಕೆಯಾಗಿದೆ ಎಂದು ಪರಿಸರ ಪ್ರೇಮಿ ಪ್ರೊ.ವಿ.ಎಫ್.ಅಂಗಡಿ ಹೇಳಿದರು.

ಅವರು ಪಟ್ಟಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬರು ಒಂದೊಂದು ಗಿಡ ಬೆಳೆಸಿದರೆ ಪರಿಸರಕ್ಕೆ ಬಹುದೊಡ್ಡ ಕೊಡುಗೆ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಕಪ್ಪತ್ತಗುಡ್ಡದಲ್ಲಿ ಈಗಿರುವ ಅರಣ್ಯ ಸಂಪತ್ತನ್ನು ಉಳಿಸಿಕೊಳ್ಳುವ ಜೊತೆಗೆ ಬೆಳೆಸುವ ಕಾರ್ಯವಾಗಬೇಕು. ಜನಜಾಗೃತಿ ಹಾಗೂ ಕಾಳಜಿಯಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ಆರ್.ಎಫ್.ಓ ಪ್ರದೀಪ ಎಸ್ ಪವಾರ್ ಮಾತನಾಡಿ ಪರಿಸರ ಸಂರಕ್ಷಣೆಯಲ್ಲಿ ಯುವಕರು ತೊಡಗಿಸಿಕೊಳ್ಳಬೇಕು. ಅರಣ್ಯ ಇಲಾಖೆಗೆ ಯುವಕರ ಸಹಕಾರ ಕೂಡ ಅತ್ಯವಶ್ಯಕವಾಗಿದೆ. ಇದರಿಂದ ಪರಿಸರಕ್ಕೆ ಪೂರಕವಾದ ಇನ್ನು ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಉಪ ವಲಯ ಅರಣ್ಯಾಧಿಕಾರಿ ಎ.ಎಫ್.ಶೇಖ್, ಮೈಲಾರಪ್ಪ ಮಡಿವಾಳರ ಸೇರಿದಂತೆ ಅರಣ್ಯ ರಕ್ಷಕರು, ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಪಿಎಂ ಕೇರ್ಸ್ ಯಾರೊಬ್ಬರ ಮನೆಯ ಆಸ್ತಿಯಲ್ಲ: ಸಿದ್ದರಾಮಯ್ಯ

ಬೆಂಗಳೂರು: ದೇಶದ ಜನರ ದೇಣಿಗೆಯ ಪಿಎಂ ಕೇರ್ಸ್ ಫಂಡ್ (PMCaresFund) ಯಾರೊಬ್ಬರ ಮನೆಯ ಆಸ್ತಿ ಅಲ್ಲ. ಅದು ಈ ದೇಶದ ಪ್ರಜೆಗಳ ದುಡ್ಡು, ಅದು ಸದುಪಯೋಗವಾಗಬೇಕು ಎಂದು ಹೇಳುವ ಅಧಿಕಾರ ಪ್ರತಿಯೊಬ್ಬರಿಗೆ ಇದೆ. ಅದನ್ನೇ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿಯವರು ಹೇಳಿದ್ದಾರೆ ತಪ್ಪೇನಿದೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.

ಆಲಮಟ್ಟಿ: ಬಸವಭೂಮಿ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತಾತೀಥ್ಯ

ಆಲಮಟ್ಟಿ : ಆಲಮಟ್ಟಿಗೆ ಆಗಮಿಸಿದ್ದ ಬಸವಭೂಮಿ ಯಾತ್ರೆಯ ಸಹಸ್ರಾರು ಬಸವಭಕ್ತ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು…

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.ಪ್ರತಿಜ್ಞಾ ದಿನ…