ಮುಂಡರಗಿ: ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಾವು ಬೆಳೆಸುವ ಗಿಡಿಮರಗಳು ನಮ್ಮನ್ನು ಜೀವನ ಪೂರ್ತಿ ಸಲಹುತ್ತವೆ. ಜೊತೆಗೆ ಮುಂದಿನ ಪೀಳಿಗೆಗೆ ನಾವು ಬಿಟ್ಟು ಹೋಗುವ ದೊಡ್ಡ ಕಾಣಿಕೆಯಾಗಿದೆ ಎಂದು ಪರಿಸರ ಪ್ರೇಮಿ ಪ್ರೊ.ವಿ.ಎಫ್.ಅಂಗಡಿ ಹೇಳಿದರು.

ಅವರು ಪಟ್ಟಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬರು ಒಂದೊಂದು ಗಿಡ ಬೆಳೆಸಿದರೆ ಪರಿಸರಕ್ಕೆ ಬಹುದೊಡ್ಡ ಕೊಡುಗೆ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಕಪ್ಪತ್ತಗುಡ್ಡದಲ್ಲಿ ಈಗಿರುವ ಅರಣ್ಯ ಸಂಪತ್ತನ್ನು ಉಳಿಸಿಕೊಳ್ಳುವ ಜೊತೆಗೆ ಬೆಳೆಸುವ ಕಾರ್ಯವಾಗಬೇಕು. ಜನಜಾಗೃತಿ ಹಾಗೂ ಕಾಳಜಿಯಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ಆರ್.ಎಫ್.ಓ ಪ್ರದೀಪ ಎಸ್ ಪವಾರ್ ಮಾತನಾಡಿ ಪರಿಸರ ಸಂರಕ್ಷಣೆಯಲ್ಲಿ ಯುವಕರು ತೊಡಗಿಸಿಕೊಳ್ಳಬೇಕು. ಅರಣ್ಯ ಇಲಾಖೆಗೆ ಯುವಕರ ಸಹಕಾರ ಕೂಡ ಅತ್ಯವಶ್ಯಕವಾಗಿದೆ. ಇದರಿಂದ ಪರಿಸರಕ್ಕೆ ಪೂರಕವಾದ ಇನ್ನು ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಉಪ ವಲಯ ಅರಣ್ಯಾಧಿಕಾರಿ ಎ.ಎಫ್.ಶೇಖ್, ಮೈಲಾರಪ್ಪ ಮಡಿವಾಳರ ಸೇರಿದಂತೆ ಅರಣ್ಯ ರಕ್ಷಕರು, ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಮುಳ್ಳಿನ ಮೇಲೆ ಬಟ್ಟೆ ಹಾಕಿ ತಪ್ಪು ಮಾಡಿದೆ – ಕುಮಾರಸ್ವಾಮಿ!

ರಾಮನಗರ : ನಾನು ಮುಳ್ಳಿನ ಮೇಲೆ ಬಟ್ಟೆ ಹಾಕಿ ದೊಡ್ಡ ತಪ್ಪು ಮಾಡಿದೆ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ನಗರಸಭೆ ಅಧ್ಯಕ್ಷರಾಗಿ ಉಷಾ ದಾಸರ ಹಾಗೂ ಉಪಾಧ್ಯಕ್ಷರಾಗಿ ಸುನಂದಾ ಬಾಕಳೆ ಆಯ್ಕೆ

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿದ್ದು, ಬಿಜೆಪಿಯು ಈ…

ಕೊರೊನಾ ಎಫೆಕ್ಟ್ – ಹೊಲದಲ್ಲಿ ಬೆಳೆದ ಎಲೆಕೋಸನ್ನು ನಾಶ ಮಾಡಿದ ರೈತ!

ಚಿಕ್ಕಮಗಳೂರು: ಸರ್ಕಾರ ಎಷ್ಟೇ ಭರವಸೆ ನೀಡಿದರೂ ರೈತರ ಬವಣೆ ಮಾತ್ರ ನೀಗುತ್ತಿಲ್ಲ. ರೈತರೊಬ್ಬರು ಹಗಲಿರುಳು ಕಷ್ಟಪಟ್ಟು…

ಗದಗ ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್! : 200 ಗಡಿ ಸಮೀಪಿಸುತ್ತಿದೆ ಸೋಂಕಿತರ ಸಂಖ್ಯೆ

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.