ಮುಂಡರಗಿ: ಪರಿಸರ ಕಾಳಜಿಯಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಾವು ಬೆಳೆಸುವ ಗಿಡಿಮರಗಳು ನಮ್ಮನ್ನು ಜೀವನ ಪೂರ್ತಿ ಸಲಹುತ್ತವೆ. ಜೊತೆಗೆ ಮುಂದಿನ ಪೀಳಿಗೆಗೆ ನಾವು ಬಿಟ್ಟು ಹೋಗುವ ದೊಡ್ಡ ಕಾಣಿಕೆಯಾಗಿದೆ ಎಂದು ಪರಿಸರ ಪ್ರೇಮಿ ಪ್ರೊ.ವಿ.ಎಫ್.ಅಂಗಡಿ ಹೇಳಿದರು.

ಅವರು ಪಟ್ಟಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬರು ಒಂದೊಂದು ಗಿಡ ಬೆಳೆಸಿದರೆ ಪರಿಸರಕ್ಕೆ ಬಹುದೊಡ್ಡ ಕೊಡುಗೆ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಕಪ್ಪತ್ತಗುಡ್ಡದಲ್ಲಿ ಈಗಿರುವ ಅರಣ್ಯ ಸಂಪತ್ತನ್ನು ಉಳಿಸಿಕೊಳ್ಳುವ ಜೊತೆಗೆ ಬೆಳೆಸುವ ಕಾರ್ಯವಾಗಬೇಕು. ಜನಜಾಗೃತಿ ಹಾಗೂ ಕಾಳಜಿಯಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ಆರ್.ಎಫ್.ಓ ಪ್ರದೀಪ ಎಸ್ ಪವಾರ್ ಮಾತನಾಡಿ ಪರಿಸರ ಸಂರಕ್ಷಣೆಯಲ್ಲಿ ಯುವಕರು ತೊಡಗಿಸಿಕೊಳ್ಳಬೇಕು. ಅರಣ್ಯ ಇಲಾಖೆಗೆ ಯುವಕರ ಸಹಕಾರ ಕೂಡ ಅತ್ಯವಶ್ಯಕವಾಗಿದೆ. ಇದರಿಂದ ಪರಿಸರಕ್ಕೆ ಪೂರಕವಾದ ಇನ್ನು ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಉಪ ವಲಯ ಅರಣ್ಯಾಧಿಕಾರಿ ಎ.ಎಫ್.ಶೇಖ್, ಮೈಲಾರಪ್ಪ ಮಡಿವಾಳರ ಸೇರಿದಂತೆ ಅರಣ್ಯ ರಕ್ಷಕರು, ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಸರ್ಕಾರದ ನಡೆಯಿಂದ ನಮ್ಮ ಭಾಗದ ಯುವಕರಿಗೆ ಅನ್ಯಾಯ -ಮೋಹನ ದೊಡಕುಂಡಿ

ಉತ್ತರಪ್ರಭ ಸುದ್ದಿಗದಗ: 545 ಪಿ.ಎಸ್.ಐ ಹುದ್ದೆಗಳಿಗೆ ನೇಮಕಾತಿ ಕರೆದಿದ್ದ ಸರ್ಕಾರ ಸದ್ಯ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆಯಾಗಿದ್ದರೂ…

ಇಂದು 48 ಜನರಲ್ಲಿ ಕಂಡು ಬಂದ ಸೋಂಕು!! ಆತಂಕದಲ್ಲಿ ರಾಜ್ಯ!!

ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ.

ಗದಗ ಜಿಲ್ಲೆಯಲ್ಲಿಂದು 10 ಕೊರೊನಾ ಪಾಸಿಟಿವ್: ಶತಕ ದಾಟಿದ ಸೋಂಕಿತರ ಸಂಖ್ಯೆ!

ಜಿಲ್ಲೆಯಲ್ಲಿಂದು ಮತ್ತೆ 7 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಈವರೆಗೆ ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 2 ಕೇಸ್ ಗಳು ಮೃತ ಪಟ್ಟಿವೆ.

ಗದಗ ಜಿಲ್ಲೆಯಲ್ಲಿ ವಿವಿದೆಡೆ 66400 ರೂ, ಮೌಲ್ಯದ ಅಕ್ರಮ ಮದ್ಯ ವಶ: ಆರೋಪಿಗಳ ಬಂಧನ

ಗದಗ: ಕೋವಿಡ್ 19 ಮಾರ್ಗಸೂಚಿಗಳನ್ನು ಹಾಗೂ ಕಾನೂನು ಉಲ್ಲಂಘನೆ ಮಾಡಿ ಅಕ್ರಮ ಸಾರಾಯಿ ಮಾರಾಟ ಮಾಡುತ್ತಿದ್ದ 15 ಜನ ಆರೋಪಿತರಿಗಳನ್ನು ಬಂಧಿಸಿ , ಅವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿ, ಬಂಧಿತರಿಂದ 66400 ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳಲಾಗಿದೆ