ಮುಂಬಯಿ:  ಸೊಲ್ಲಾಪುರ ಜೈಲಿನಲ್ಲಿನ ಸುಮಾರು 60 ಜನ ಸಿಬ್ಬಂದಿಯಲ್ಲಿ ಕೊರೊನಾ ಕಂಡು ಬಂದಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಮಿಲಿಂದ್ ಶಂಭಾರ್ಕರ್, ಜೈಲಿನಲ್ಲಿ ಒಟ್ಟು 300 ಕೈದಿಗಳಿದ್ದಾರೆ. ಆದರೆ, 60 ಜನರಿಗೆ ಸೋಂಕು ತಗುಲಿದೆ. ಈ ಪೈಕಿ 8 ಜನ ಜೈಲು ಸಿಬ್ಬಂದಿಗಳು ಇದ್ದಾರೆ. ಸದ್ಯ ಎಲ್ಲರನ್ನೂ ಐಸೋಲೇಷನ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸೊಲ್ಲಾಪುರ ಜೈಲಿನ ಕೈದಿ ಮತ್ತು ಸಿಬ್ಬಂದಿಗೆ ಕೊರೊನಾ ಗುಣಲಕ್ಷಣಗಳು ಕಂಡು ಬಂದಿದ್ದವು.  ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ತಕ್ಷಣವೇ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಒಟ್ಟು 60 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.

ಇಲ್ಲಿಯವರೆಗೂ ಸೊಲ್ಲಾಪುರ ಜಿಲ್ಲೆಯಲ್ಲಿ 1144 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 99 ಜನ ಸಾವನ್ನಪ್ಪಿದ್ದಾರೆ. ಮಹಾಮಾರಿ ಕೊರೊನಾ ಮಹಾರಾಷ್ಟ್ರ ರಾಜ್ಯದಲ್ಲಿ ಮೇಲೆ ತನ್ನ ಕರಿನೆರಳು ಬೀರಿದೆ. ಇಲ್ಲಿಯವರೆಗೂ ಮಹಾರಾಷ್ಟ್ರದಲ್ಲಿ ಸುಮಾರು 74 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 2,587 ಜನ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಪೊಲೀಸರಿಂದ ವರೀಷ್ಠಾಧಿಕಾರಿ ಮೇಲೆ ಹಲ್ಲೆ..!

ಕೋಲ್ಕತಾ: ಅಂಫಾನ್ ಚಂಡಮಾರುತ ಹಿನ್ನಲೆಯಲ್ಲಿ ನಿಯೋಜನೆಯಾಗಿರುವ ಅಂದಾಜು 500 ಪೊಲೀಸ್ ಪೇದೆಗಳು ತಮ್ಮ ರೂಂ ಸ್ಯಾನಿಟೈಸ್…

ಅಮಿತ್ ಶಾ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಪ್ರಕಾಶ್ ರೈ

ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಹುಭಾಷಾ ನಟ ಪ್ರಕಾಶ್ ರೈ, ಎಂತಹ ಅವಮಾನ ಸುಳ್ಳಿಗೇ ಸುಳ್ಳು ಹೇಳಲಾಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಊರಳಿಯನಿಂದ ಬಂತು ಸೋಂಕು: ಆರ್.ಎಂ.ಪಿ ಡಾಕ್ಟರ್ ನಿಂದ ಸುತ್ತಲಿನ ಗ್ರಾಮಸ್ಥರಿಗೆ ಆತಂಕ..!

ಗದಗ: ಊರಳಿಯ ಮಾವನ ಮನೆಗೆ ಬಂದಿದ್ದಾನೆ. ಆದರೆ ಆತನಿಗೆ ಸೋಂಕು ತಗುಲಿರುವುದು ಸ್ವತ: ಆತನಿಗೂ ಗೊತ್ತಿರಲಿಲ್ಲ.…

ಸರ್ಕಾರದ ಮಾರ್ಗಸೂಚಿ ಬದುಕಿನ ಭಾಗವಾಗಬೇಕು: ಸುಧಾಕರ್

ಕೋವಿಡ್ ರೋಗಕ್ಕೆ ಲಸಿಕೆ ಸಿಗುವತನಕ ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಜನರು ಚಾಚೂ ತಪ್ಪದೆ ತಮ್ಮಬದುಕಿನ ಭಾಗವಾಗಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.