ಲಕ್ನೋ: ಪ್ರತಿಷ್ಠಿತ ಸೈಕಲ್ ತಯಾರಿಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಸ್ಥಗಿತಗೊಂಡಿದೆ. ಉದ್ಯೋಗಿಗಳಿಗೆ ಯಾವುದೇ ಸೂಚನೆ ನೀಡದೆ ಕಂಪನಿಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ನೌಕರಸ್ಥರು ಬೀದಿಗೆ ಬಂದಿದ್ದಾರೆ.

ಉತ್ತರ ಪ್ರದೇಶದ ಘಾಝಿಯಾಬಾದ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟ್ಲಾಸ್ ಕಂಪನಿಯನ್ನು ನಷ್ಟದ ಕಾರಣ ಹೇಳಿ ಸ್ಥಗಿತಗೊಳಿಸಲಾಗಿದೆ. ಈ ಮೂಲಕ ಭಾರತದ ಸೈಕಲ್ ತಯಾರಿಕಾ ಕಂಪೆನಿಯ ಬಹುದೊಡ್ಡ ಸಂಸ್ಥೆ ಮುಚ್ಚಿದಂತಾಗಿದೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳು ಕಾಲ ಕಂಪನಿಯನ್ನು ಬಂದ್ ಮಾಡಲಾಗಿತ್ತು. ಆದರೆ, ಜೂ. 1 ರಂದು ಕಂಪನಿಯನ್ನು ಮರಳಿ ಓಪನ್ ಮಾಡಲಾಗಿತ್ತು. ಎರಡು ದಿನಗಳ ಕಾಲ ನೌಕರಸ್ಥರು ಖುಷಿಯಿಂದಲೇ ಕೆಲಸ ಮಾಡಿದ್ದರು. ಆದರೆ, ನಿನ್ನೆ ಏಕಾಏಕಿ ಕಂಪನಿಯ ಬಾಗಿಲು ಮುಂದೆ, ಸಂಸ್ಥೆ ಮುಚ್ಚಿರುವ ಬಗ್ಗೆ ನೊಟೀಸ್ ಹಾಕಲಾಗಿತ್ತು. ಇದನ್ನು ಕಂಡ ನೌಕರಸ್ಥರು ಶಾಕ್ ಆಗಿದ್ದಾರೆ. ಈ ಮೂಲಕ ಸಾವಿರಾರು ನೌಕರಸ್ಥರು ಬೀದಿಗೆ ಬಂದಿದ್ದಾರೆ.

ಈ ಹಿಂದೆಯೂ ಸೈಕಲ್ ತಯಾರಿಕಾ ಕಂಪನಿಗಳು ಬಾಗಿಲು ಹಾಕಿಕೊಂಡಿದ್ದವು. ಅಟ್ಲಾಸ್ ಕಂಪನಿಯಲ್ಲಿ ಪ್ರತಿ ತಿಂಗಳು 2 ಲಕ್ಷಕ್ಕೂ ಅಧಿಕ ಸೈಕಲ್ ಗಳನ್ನು ತಯಾರಿಸಲಾಗುತ್ತಿತ್ತು. ಕಂಪನಿಯ ನಿರ್ಧಾರದಿಂದಾಗಿ ನೌಕರಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಹಲವರು ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…

ಬ್ರೆಜಿಲ್‍,ಆಫ್ರಿಕಾ ವೈರಸ್ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ; ರಾಹುಲ್‍ ಕಿಡಿ

ದೇಶದಲ್ಲಿ ಮತ್ತೆ ಏರಿಕೆಯತ್ತ ಸಾಗಿರುವ ಕೊರೊನಾ ಸೋಂಕಿನ ವಿಚಾರದಲ್ಲಿ ಕೇಂದ್ರ ಸರ್ಕಾರ ನಿಷ್ಕಾಳಜಿ ತೋರಿಸುತ್ತಿದೆ ಎಂದು ಕಾಂಗ್ರೆಸ್‍ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40,263ಕ್ಕೆ ಏರಿಕೆ..!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ 2,487 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸಂಖ್ಯೆ 40,263ಕ್ಕೆ ಏರಿಕೆಯಾಗಿದೆ.

ಕೇಂದ್ರದಿಂದ ರಾಜ್ಯಕ್ಕೆ ಜಿ.ಎಸ್.ಟಿ. ದ್ರೋಹ: ಸಿದ್ದರಾಮಯ್ಯ

ರಾಜ್ಯಗಳಿಗೆ ಜಿಎಸ್ ಟಿ ಪರಿಹಾರ ನೀಡಲು ಸಂಗ್ರಹ ಮಾಡಿದ್ದ ಸೆಸ್ ಹಣವನ್ನು @narendramodi ಸರ್ಕಾರ ಅನ್ಯ ಉದ್ದೇಶಕ್ಕೆ ಬಳಸಿದೆ ಎಂದು ಸಿಎಜಿ ನೀಡಿರುವ ವರದಿ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಬಗೆದಿರುವ ಜಿ ಎಸ್ ಟಿ ದ್ರೋಹಕ್ಕೆ ಪುರಾವೆಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.