ಲಕ್ನೋ: ಪ್ರತಿಷ್ಠಿತ ಸೈಕಲ್ ತಯಾರಿಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಸ್ಥಗಿತಗೊಂಡಿದೆ. ಉದ್ಯೋಗಿಗಳಿಗೆ ಯಾವುದೇ ಸೂಚನೆ ನೀಡದೆ ಕಂಪನಿಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ನೌಕರಸ್ಥರು ಬೀದಿಗೆ ಬಂದಿದ್ದಾರೆ.

ಉತ್ತರ ಪ್ರದೇಶದ ಘಾಝಿಯಾಬಾದ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟ್ಲಾಸ್ ಕಂಪನಿಯನ್ನು ನಷ್ಟದ ಕಾರಣ ಹೇಳಿ ಸ್ಥಗಿತಗೊಳಿಸಲಾಗಿದೆ. ಈ ಮೂಲಕ ಭಾರತದ ಸೈಕಲ್ ತಯಾರಿಕಾ ಕಂಪೆನಿಯ ಬಹುದೊಡ್ಡ ಸಂಸ್ಥೆ ಮುಚ್ಚಿದಂತಾಗಿದೆ.

ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳು ಕಾಲ ಕಂಪನಿಯನ್ನು ಬಂದ್ ಮಾಡಲಾಗಿತ್ತು. ಆದರೆ, ಜೂ. 1 ರಂದು ಕಂಪನಿಯನ್ನು ಮರಳಿ ಓಪನ್ ಮಾಡಲಾಗಿತ್ತು. ಎರಡು ದಿನಗಳ ಕಾಲ ನೌಕರಸ್ಥರು ಖುಷಿಯಿಂದಲೇ ಕೆಲಸ ಮಾಡಿದ್ದರು. ಆದರೆ, ನಿನ್ನೆ ಏಕಾಏಕಿ ಕಂಪನಿಯ ಬಾಗಿಲು ಮುಂದೆ, ಸಂಸ್ಥೆ ಮುಚ್ಚಿರುವ ಬಗ್ಗೆ ನೊಟೀಸ್ ಹಾಕಲಾಗಿತ್ತು. ಇದನ್ನು ಕಂಡ ನೌಕರಸ್ಥರು ಶಾಕ್ ಆಗಿದ್ದಾರೆ. ಈ ಮೂಲಕ ಸಾವಿರಾರು ನೌಕರಸ್ಥರು ಬೀದಿಗೆ ಬಂದಿದ್ದಾರೆ.

ಈ ಹಿಂದೆಯೂ ಸೈಕಲ್ ತಯಾರಿಕಾ ಕಂಪನಿಗಳು ಬಾಗಿಲು ಹಾಕಿಕೊಂಡಿದ್ದವು. ಅಟ್ಲಾಸ್ ಕಂಪನಿಯಲ್ಲಿ ಪ್ರತಿ ತಿಂಗಳು 2 ಲಕ್ಷಕ್ಕೂ ಅಧಿಕ ಸೈಕಲ್ ಗಳನ್ನು ತಯಾರಿಸಲಾಗುತ್ತಿತ್ತು. ಕಂಪನಿಯ ನಿರ್ಧಾರದಿಂದಾಗಿ ನೌಕರಸ್ಥರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಹಲವರು ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದೇಶ ಉದ್ಧೇಶಿಸಿ ಮಾತನಾಡಿದ ಪ್ರಧಾನಿ ಮೋದಿ! ಈ ಭಾಷಣದಲ್ಲಿ ಏನು ಹೇಳಿದರು?

ನವದೆಹಲಿ : ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಕಡಿಮೆಯಾಗಿರುವ ಸಂತಸ ಹಂಚಿಕೊಂಡಿದ್ದಾರೆ.

ಈ ಮಹಿಳಾ ಪೇದೆಯ ಧೈರ್ಯಕ್ಕೆ ಇಡೀ ದೇಶವೇ ತಲೆ ಬಾಗುತ್ತಿದೆ!

ಹೈದರಾಬಾದ್ : ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಬೀಳುತ್ತಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸರೊಬ್ಬರು ಕಾಪಾಡಿರುವ ಘಟನೆ ಆಂಧ್ರ ಪ್ರದೇಶದ ವಿಶಾಕಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ-ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಹೊಸದಿಲ್ಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ…

ಸಾಮಾಜಿಕ ಜಾಲತಾಣಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್

ಸಾಮಾಜಿಕ ಜಾಲತಾಣ ದೈತ್ಯ ಟ್ವಿಟರ್ ಮತ್ತು ಫೇಸ್ ಬುಕ್, ವಾಟ್ಸ್ ಆಯಪ್ ಮುಂತಾದ ಸಾಮಾಜಿಕ ಜಾಲತಾಣಗಳು ನೆಲದ ನಿಯಮವನ್ನು ಪಾಲಿಸಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಹರಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.