ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಎಸ್’ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಸಂವಾದ ಮಾಡಿ ಮಾತನಾಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಲಾಗುವುದು. ರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಡಿಯಾಚೆಯಿಂದ ಬರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ. ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದ್ದಾರೆ. ಅಲ್ಲದೇ, ಜೂ. 25ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದಿಂದ ಶಿಕ್ಷಣ ಸಚಿವ,ಅಧಿಕಾರಿಗಳಿಗೆ ಭೇಟಿ- ಬೇಡಿಕೆ ಈಡೇರಿಕೆಗೆ ಮನವಿ

ವರದಿ : ಗುಲಾಬಚಂದ ಆರ್.ಜಾಧವ, ಆಲಮಟ್ಟಿ ಆಲಮಟ್ಟಿ : ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ…

ಬೀದಿಬದಿ ವ್ಯಾಪಾರಸ್ಥರಿಗಾಗಿ ಸರ್ಕಾರ ಯೋಜನೆಗಳನ್ನು ಜಾರಿಗೆ ತರಬೇಕು

ಲಕ್ಷ್ಮೇಶ್ವರ: ಬೀದಿಬದಿ ವ್ಯಾಪಾರಸ್ಥರು ಕೊರೋನಾ ಪರಿಣಾಮದಿಂದಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ಅವರ ಅನುಕೂಲಕ್ಕಾಗಿ ವಿಶೇಷ ಯೋಜನೆಗಳನ್ನು…

ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಉತ್ತರಪ್ರಭ ಸುದ್ದಿಕೋಲಾರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಇಂದು ಜೆಡಿಎಸ್ ಹಾಗೂ…

ಎಸ್.ಎಸ್.ಎಲ್.ಸಿ ಪರೀಕ್ಷೆ: ಗದಗನಲ್ಲಿ 3 ವಿದ್ಯಾರ್ಥಿಗಳು ಡಿಬಾರ್..!

ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್…