ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಎಸ್’ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಸಂವಾದ ಮಾಡಿ ಮಾತನಾಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಲಾಗುವುದು. ರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಡಿಯಾಚೆಯಿಂದ ಬರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ. ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದ್ದಾರೆ. ಅಲ್ಲದೇ, ಜೂ. 25ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಡದಿ ಮಾಂಗಲ್ಯ ಸರ ಮಾರಿ ಕುಡಿದ ಆತ ಮಾಡಿದ್ದೇನು?

ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿದ್ದ ಪಾಪಿ ಪತಿಯೊಬ್ಬ ಮಡದಿಯನ್ನೇ ಕೊಲೆ ಮಾಡಿರುವ ಘಟನೆ ಚೇಳೂರು ಪೊಲೀಸ್‌ ಠಾಣೆ…

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ

ವಿವಾದಕ್ಕೆ ಗುರಿಯಾದ ಪೊಗರು ಚಿತ್ರ

ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ವಿವಾದವೊಂದಕ್ಕೆ ಗುರಿಯಾಗಿದೆ.

ಗೃಹ ಸಚಿವರ ತವರಲ್ಲಿ ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..!

ಐಸ್ ಲಗಾ ಐಸಾ..! ಇನ್ನೂ ಸ್ವಲ್ಪ ಐಸಾ..! ತಳ್ಳದೆ ಸ್ಟಾರ್ಟ್ ಆಗ್ತಿಲ್ಲಾ ಕರೊನಾ ವಾರಿಯರ್ಸ್ ರಥ..…