ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಎಸ್’ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಸಂವಾದ ಮಾಡಿ ಮಾತನಾಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಲಾಗುವುದು. ರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಡಿಯಾಚೆಯಿಂದ ಬರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ. ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದ್ದಾರೆ. ಅಲ್ಲದೇ, ಜೂ. 25ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿ 26 ಗೇಟ್ ಓಪನ್ – ಅಪಾರ ನೀರು ಹೊರಕ್ಕೆ

ಉತ್ತರಪ್ರಭ ಸುದ್ದಿಆಲಮಟ್ಟಿ: ನೆರೆಯ ಮಹಾರಾಷ್ಟ್ರ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಕೃಷ್ಣಾ ನದಿ ಹರಿವಿನಲ್ಲಿ…

ಹೊರರಾಜ್ಯಗಳಿಂದ ಬಂದವರ ಮನೆಗಳ ಸೀಲ್ಡೌನ್ ಗೆ ಚಿಂತನೆ.!

ಹೊರರಾಜ್ಯಗಳಿಂದ ಬಂದಿರುವ ವಲಸಿಗರ ಕಾರಣದಿಂದ ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ವಲಸಿಗರ ಮನೆಗಳನ್ನು ಮಾತ್ರ ಸೀಲ್ಡೌನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸಿಕ್ಕ ಸಿಕ್ಕವರಿಗೆ ಚಾಕು ಇರಿತ ನಾಲ್ವರು ಗಂಭೀರ, ಓರ್ವ ಸಾವು!

ಬೆಂಗಳೂರು : ವ್ಯಕ್ತಿಯೊಬ್ಬ ದಾರಿಯಲ್ಲಿ ಹೋಗುತ್ತ ಸಿಕ್ಕ ಸಿಕ್ಕವರಿಗೆ ಚಾಕು ಇರಿದಿದ್ದಾನೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಡಕೋಳದಲ್ಲಿ ಸಿಡಿಲು: ಮೂವರು ಸಾವು: ನಾಲ್ವರಿಗೆ ಗಂಭೀರ ಗಾಯ

ತಾಲೂಕಿನ ಕಡಕೋಳ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ ಧಾರುಣ ಘಟನೆ ಜರುಗಿದೆ. ಘಟನೆಯ ವಿವರ: ಕಡಕೋಳ ಗ್ರಾಮದ ನಿವಾಸಿಗಳಾದ ಕುಮಾರ(24), ಶರಣಪ್ಪ ಮಾಲಿಂಗಪ್ಪ(38) ಮಾರುತಿ(50) ಹೊಲ ನೋಡಿ ಬರಲು ಹೋಗಿದ್ದು, ಮಳೆ, ಗಾಳಿ ಪ್ರಾರಂಭವಾಗಿದ್ದರಿಂದ ಅಲ್ಲಿಯೇ ಗಿಡದ ಮರೆಯಲ್ಲಿ ನಿಂತುಕೊಂಡಿದ್ದಾರೆ. ದುರಾದೃಷ್ಟವಶಾತ್ ಸಿಡಿಲು ಬಡಿದು ಈ ಮೂವರು ಸಾವನ್ನಪ್ಪಿದ್ದಾರೆ.