ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಎಸ್’ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಸಂವಾದ ಮಾಡಿ ಮಾತನಾಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಲಾಗುವುದು. ರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಡಿಯಾಚೆಯಿಂದ ಬರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ. ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದ್ದಾರೆ. ಅಲ್ಲದೇ, ಜೂ. 25ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಶೋಭಾ ಕರಂದ್ಲಾಜೆ ವಿರುದ್ಧ ಮುಗಿ ಬಿದ್ದ ಕಾಂಗ್ರೆಸ್ ಮಹಿಳೆಯರು!

ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಅವರು ಹಗುರವಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ನಾಯಕಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿನಿಪ್ರಿಯರಿಗೆ ಸಿಹಿ ಸುದ್ದಿ; ಯೂಟ್ಯೂಬ್‌ನಲ್ಲಿ 10 ದಿನಗಳ ಜಾಗತಿಕ ಸಿನಿ ಉತ್ಸವ

ಯೂಟ್ಯೂಬ್ 10 ದಿನಗಳ ಕಾಲ ಸಿನಿ ಉತ್ಸವ ಆಯೋಜಿಸುವ ಮೂಲಕ ಸಿನಿ ಪ್ರೀಯರಿಗೆ ಸಿಹಿ ಸುದ್ದಿ ನೀಡಿರುವ ಜೊತೆಗೆ ಉತ್ಸವದ ಜಾಹಿರಾತಿನಿಂದ ಬಂದ ಲಾಭವನ್ನು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್‌ 19 ಸಾಲಿಡಾರಿಟಿ ರೆಸ್ಪಾನ್ಸ್‌ ಫಂಡ್‌ಗೆ ನೀಡುವುದಾಗಿ ಯೂಟ್ಯೂಬ್‌ ತಿಳಿಸಿದೆ.

ತೋಟಗಾರಿಕೆ ಬೆಳೆಗಳಿಗೆ ವಿಮಾ ಕಂತು ಪಾವತಿಗೆ ಜೂನ್ 30 ಕೊನೆಯ ದಿನ

ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ದಾಳಿಂಬೆ ಮತ್ತು ಪಪ್ಪಾಯ (ಪರಂಗಿ) ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ಬಜಾಜ್ ಅಲೆನ್ಸ್ ಇನ್ಸೂರೆನ್ಸ ಕಂಪನಿ ವಿಮೆ ನೀಡಲಿದೆ.

ಎರಡು ತಲೆ ಹಾವು ವಶಕ್ಕೆ – ಐವರ ಬಂಧನ!

ಮೈಸೂರು : ಎರಡು ತಲೆ ಹಾವಿನೊಂದಿಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.