ಬೆಂಗಳೂರು: ವಿದ್ಯಾರ್ಥಿಗಳು ತಾವು ಇಚ್ಛಿಸಿರುವ ಕೇಂದ್ರಗಳಲ್ಲಿಯೇ ಪರೀಕ್ಷೆಗಳನ್ನು ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ, ಎಸ್’ಪಿ, ಜಿಲ್ಲಾ ಮತ್ತು ತಾಲೂಕು ಖಜಾನೆ ಅಧಿಕಾರಿಗಳು, ಡಿಡಿಪಿಐ, ಬಿಇಒರೊಂದಿಗೆ ವಿಡಿಯೋ ಸಂವಾದ ಮಾಡಿ ಮಾತನಾಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಆರಂಭಿಸಲಾಗುವುದು. ರೀಕ್ಷೆಗೂ ಮುನ್ನ ಕೊನೇ ಗಳಿಗೆಯಲ್ಲಿ ಕಂಟೈನ್ಮೆಂಟ್ ವಲಯಗಳಾಗಿ ಘೋಷಿತವಾದರೆ ತಕ್ಷಣದ ಅನುಕೂಲಕ್ಕಾಗಿ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬದಲಿ ಐದು ಕೇಂದ್ರಗಳನ್ನು ಗುರುತಿಸಿ ಸಿದ್ಧವಾಗಿಟ್ಟುಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಗಡಿಯಾಚೆಯಿಂದ ಬರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ. ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ವಿದ್ಯಾರ್ಥಿಗಳಿಗೆ ತಾವು ಇಚ್ಛಿಸಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಡುವಂತೆ ಸೂಚಿಸಿದ್ದಾರೆ. ಅಲ್ಲದೇ, ಜೂ. 25ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗುಲಗಂಜಿಕೊಪ್ಪ ವಿದ್ಯಾರ್ಥಿಗಳ ಗೋಳು ಕೇಳೋರು ಯಾರು

ಲಕ್ಷ್ಮೇಶ್ವರ: ತಾಲೂಕಿನ ಗುಲಗಂಜಿಕೊಪ್ಪ ಗ್ರಾಮದ ವಿದ್ಯಾರ್ಥಿಗಳಿಗೆ ಯಾರು ಬಸ್ ನಿಲ್ಲಸೊಲ್ಲ ವಿದ್ಯಾರ್ಥಿಗಳಿಗೆ ಏನು ಮಾಡಬೇಕು ಎಂದು ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಹಾಗೂ ಕರವೇ ಸ್ವಾಭಿಮಾನ ಬಣದಿಂದ ಲಕ್ಷ್ಮೇಶ್ವರ ಬಸ್ ಡಿಪೋದಲ್ಲಿ ಮನವಿ ಸಲ್ಲಿಸಲಾಯಿತು.

ಗದಗನಲ್ಲಿ ಮತ್ತೆ ಇಬ್ಬರಿಗೆ ಕೊರೋನಾ ಪಾಸಿಟಿವ್

ಗದಗ: ಜಿಲ್ಲೆಯಲ್ಲಿ ಮತ್ತೆ ಎರಡು ಕೊರೋನಾ ಪಾಸಿಟಿವ್ ದೃಢಪಟ್ಟಿವೆ‌. ಈ ಮೂಲಕ ಸೋಂಕಿತರ ಸಂಖ್ಯೆ 20…

ವಿಶಾಖಪಟ್ಟಣ ದುರ್ಘಟನೆ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಇಲ್ಲಿನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…