ರಾತ್ರಿ ಕರ್ಫ್ಯೂ ಹಿಂಪಡೆದ ಸರ್ಕಾರ!

ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, ಇನ್ನು ಮುಂದೆ ರಾತ್ರಿ ಹೊತ್ತಿನಲ್ಲಿಯೂ ಮೊದಲಿನಂತೆ ಸಂಚರಿಸಬಹುದು.
ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿ ಹೊತ್ತಿನಲ್ಲಿಯೂ ಸಂಚರಿಸಬಹುದು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ರಾತ್ರಿ ಹೊತ್ತಿನಲ್ಲಿ ಸರ್ಕಾರ ಕರ್ಫ್ಯೂ ಹೇರಿತ್ತು. ಆದರೆ, ಇನ್ನೂ ಮುಂದೆ ಆ ಕರ್ಫ್ಯೂ ನಿಯಮವನ್ನು ಹಿಂಪಡೆದಿದೆ.
ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿಗಳಲ್ಲಿ ಕಂಟೈನ್ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆ ಸಂಚರಿಸಬಹುದು. ಪ್ರಯಾಣಿಕರು ಹೊಂದಿರುವಂತಹ ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಗೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗಳಿಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.

Exit mobile version