ಬೆಂಗಳೂರು: ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, ಇನ್ನು ಮುಂದೆ ರಾತ್ರಿ ಹೊತ್ತಿನಲ್ಲಿಯೂ ಮೊದಲಿನಂತೆ ಸಂಚರಿಸಬಹುದು.
ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿ ಹೊತ್ತಿನಲ್ಲಿಯೂ ಸಂಚರಿಸಬಹುದು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ರಾತ್ರಿ ಹೊತ್ತಿನಲ್ಲಿ ಸರ್ಕಾರ ಕರ್ಫ್ಯೂ ಹೇರಿತ್ತು. ಆದರೆ, ಇನ್ನೂ ಮುಂದೆ ಆ ಕರ್ಫ್ಯೂ ನಿಯಮವನ್ನು ಹಿಂಪಡೆದಿದೆ.
ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿಗಳಲ್ಲಿ ಕಂಟೈನ್ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆ ಸಂಚರಿಸಬಹುದು. ಪ್ರಯಾಣಿಕರು ಹೊಂದಿರುವಂತಹ ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಗೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗಳಿಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರೈತ ಸಂಘದ ಪ್ರತಿಭಟನೆ ಹಿನ್ನೆಲೆ ಬಿಎ/ಬಿಕಾಂ ಪರೀಕ್ಷೆ ಮುಂದೂಡಿಕೆ

ಇದೇ ದಿನಾಂಕ 28 ರಂದು ರೈತ ಸಂಘಟನೆಗಳು ನೀಡಿರುವ ಬಂದ್ ಕರೆ ಹಿನ್ನೆಲೆ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯ ಸ್ನಾತಕ ಪರೀಕ್ಷೆಗಳನ್ನು ಮುಂದೂಡಿದೆ. ಬಂದ್ ಕರೆ ಹಿನ್ನೆಲೆ ಸಾರಿಗೆ ವ್ಯವಸ್ಥೆಯಲ್ಲಿ ಏರುಪೇರಾಗುವ ಸಂಭವವಿದೆ. ಇದರಿಂದ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಧಾರವಾಡ ವಿವಿ ಈ ನಿರ್ಧಾರ ತೆಗೆದುಕೊಂಡಿದೆ.

ಮುಂಬಯಿನಲ್ಲಿ ಮನೆ ಮಾಡುತ್ತಿರುವ ಆತಂಕ!

ಮಹಾರಾಷ್ಟ್ರದಲ್ಲಿ ಕೊರೊನಾ ಮಹಾಮಾರಿ ಮಿತಿ ಮೀರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ರಾಜ್ಯದ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಗ್ರಾಪಂ ಮಾಜಿ ಅಧ್ಯಕ್ಷನ ದರ್ಪ!: ಮರಳು ಟಿಪ್ಪರ್ ನಿಧಾನವಾಗಿ ಓಡಿಸಿ ಅಂದಿದ್ದಕ್ಕೆ ಹಲ್ಲೆ ಮಾಡಿದ ಆರೋಪ

ಹೇಳೋದು ವೇದಾಂತ, ತಿನ್ನೋದು ಬದನೆಕಾಯಿ ಎನ್ನುತ್ತಾರಲ್ಲ, ಆ ರೀತಿಯ ಕಥೆಯಿದು. ಇಲ್ಲೊಬ್ಬ ವ್ಯಕ್ತಿ ಊರಿನ ಮುಖಂಡ. ಪ್ರತಿ ದಿನ ನಾಲ್ಕಾರು ಜನಕ್ಕೆ ಬುದ್ಧಿ ಹೇಳುತ್ತಿದ್ದ. ಸದ್ಯ ಈ ವ್ಯಕ್ತಿಯೇ ಕುಟುಂಬವೊಂದರ ಮೇಲೆ ದರ್ಪ ಮೆರೆದಿದ್ದಾನೆ.

ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಗದಗ: ಮದುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ 44 ವರ್ಷದ ಲಕ್ಕುಂಡಿ ಗ್ರಾಮದ ಪುರುಷ ಗದಗ…