ನವದೆಹಲಿ : ಕೇಂದ್ರ ಸರ್ಕಾರದ ಸೂಚನೆಯಂತೆ ಜೂ. 8ರಿಂದ ಎಲ್ಲ ಧಾರ್ಮಿಕ ಕೇಂದ್ರಗಳು ಮರಳಿ ಓಪನ್ ಆಗಲಿವೆ. ಇದಕ್ಕಾಗಿ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
ಕೇಂದ್ರದ ಮಾರ್ಗಸೂಚಿಯಂತೆ ಧಾರ್ಮಿಕ ಕ್ಷೇತಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ ಎಂದು ತಿಳಿಸಿದ್ದು, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳನ್ನು ಧಾರ್ಮಿಕ ಕೇಂದ್ರಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ದೇವಸ್ಥಾನಕ್ಕೆ ಬರುವವರು ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಸಾಮೂಹಿಕ ಪ್ರಾರ್ಥನೆ ಬದಲಾಗಿ, ವೈಯಕ್ತಿಕ ಪೂಜೆಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದೆ. ನಿಯಮಿತವಾಗಿ ಕೈ ಸ್ಯಾನಿಟೈಸ್ ಅಥವಾ ಸಾಬೂನಿಂದ ಕೈ ತೊಳೆದುಕೊಳ್ಳಲು ತಿಳಿಸಿದೆ. ಕೆಮ್ಮುವಾಗ ಸೀನುವಾಗ ಟಿಶು, ಕರವಸ್ತ್ರ ಬಳಸಿದ ಬಳಿಕ ಸೂಕ್ತವಾಗಿ ವಿಲೇವಾರಿ ಮಾಡಬೇಕು. ಧಾರ್ಮಿಕ ಕೇಂದ್ರ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮತ್ತು ಕೈ ಸ್ವಚ್ಛ ಮಾಡಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ.
ಧಾರ್ಮಿಕ ಕೇಂದ್ರಗಳಲ್ಲಿ ಪ್ರವೇಶವನ್ನು ನಿಯಂತ್ರಿಸಣ, ಸಮಯದ ಆಧಾರದಲ್ಲಿ ಶಿಫ್ಟ್ ಗಳನ್ನು ಮಾಡಲು ತಿಳಿಸಿದೆ. ಅಲ್ಲದೇ ಶೂ ಚಪ್ಪಲಿಗಳನ್ನು ಭಕ್ತರು ವಾಹನದಲ್ಲಿ ಇಟ್ಟುಕೊಳ್ಳಬೇಕು, ಧಾರ್ಮಿಕ ಕ್ಷೇತ್ರದ ಒಳ ತರುವಂತಿಲ್ಲ, ಅನಿವಾರ್ಯವಾದರೆ ಚಪ್ಪಲಿಗಳನ್ನು ಪ್ರತ್ಯೇಕಿಸಿ ಇಡಬೇಕು ಎಂದು ಸೂಚಿಸಿದೆ.
[6/5, 3:50 PM

Leave a Reply

Your email address will not be published. Required fields are marked *

You May Also Like

ಗೂಗಲ್ ಫೋಟೋ ಬ್ಯಾಕ್ಅಪ್ ಸ್ಟೋರೇಜ್ ಗೆ ಇನ್ಮುಂದೆ ಹಣ ಪಾವತಿಸಬೇಕು

ಈಗಾಗಲೇ ಹಲವು ವರ್ಷಗಳಿಂದ ಮೊಬೈಲ್ ಗಳಲ್ಲಿ ಗೂಗಲ್ ಫೋಟೋಗಳು ಉಚಿತವಾಗಿ ಸಿಗುತ್ತಿದ್ದವು. ಆದರೆ ಇನ್ಮುಂದೆ ಹಾಗಿಲ್ಲ. ಫೋಟೋ ಬ್ಯಾಕ್ ಅಪ್ ಸ್ಟೋರೇಜ್ ಮಾಡಲು ಹಣ ಪಾವತಿಸುವಂತಾಗಿದೆ.

ಹೆಚ್ಚಿದ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆ: ಮುಂದೂಡಿದ ಅರ್ಜಿ ಸಲ್ಲಿಕೆ

ಉತ್ತರಪ್ರಭಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಮುಂದಿನ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ…

ಸಚಿವ ಸುಧಾಕರ್ ತಂದೆ ಆಸ್ಪತ್ರೆಗೆ ದಾಖಲು.

ಬೆಂಗಳೂರು: ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರ ತಂದೆಗೆ ಕೆಮ್ಮು ಮತ್ತು ಉಸಿರಾಟ ತೊಂದರೆ ಕಂಡು ಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಾ. ಸುಧಾಕರ್ ಟ್ವಿಟ್ ಮಾಡಿದ್ದಾರೆ.

ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತುವಂತೆ!: ಅದರ ಮೇಲೆ ಶೇ.18 ಜಿ.ಎಸ್.ಟಿ ಏಕಂತೆ?

ಕೇಂದ್ರ ಸರ್ಕಾರ ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತು ಎನ್ನುತ್ತದೆ . ಆದರೆ ತೆರಿಗೆ ಇಲಾಖೆಯು ಅದನ್ನು ‘ಆಲ್ಕೊಹಾಲ್’ ಕೆಟಗರಿಗೆ ಸೇರಿಸಿ ಶೇ.18 ಜಿ.ಎಸ್.ಟಿ ತೆರಿಗೆ ಹೇರಿದ್ದನ್ನು ಸಮರ್ಥಿಸುತ್ತದೆ.