ಬೆಂಗಳೂರು: ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.
ಜೂ.9ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂ.10ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್ 12 ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಪ್ರಭಾಕರ ಕೋರೆ, ಬಿ.ಕೆ.ಹರಿಪ್ರಸಾದ್, ಕುಪೇಂದ್ರರಡ್ಡಿ, ರಾಜಿವ್ ಗೌಡ ನಿವೃತ್ತಿ ಹೊಂದಲಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಹೀಗಾಗಿ ಈಗಾಗಲೇ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಮೂರು ಪಕ್ಷಗಳಲ್ಲಿ ಆಕಾಂಕ್ಷಿಗಳು ಲಾಭಿ ನಡೆಸಿದ್ದಾರೆ. ಸದ್ಯ ಸದಸ್ಯ ಬಲ ಹೆಚ್ಚಿರುವ ಬಿಜೆಪಿಯಲ್ಲಿ ಮಾತ್ರ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಆದರೆ ಕಾಂಗ್ರೆಸ್ ನಲ್ಲೂ ಕೂಡ ಆಕಾಂಕ್ಷಿಗಳು ಇದ್ದಾಗ್ಯೂ ಮಲ್ಲಿಕಾರ್ಜುನ ಖರ್ಗೆ ಹೆಸರೆ ಅಂತಿಮವಾಗುವ ಸಾಧ್ಯತೆ ಹೆಚ್ಚಿದೆ.