ಬೆಂಗಳೂರು: ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.

ಜೂ.9ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂ.10ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್ 12 ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಪ್ರಭಾಕರ ಕೋರೆ, ಬಿ.ಕೆ.ಹರಿಪ್ರಸಾದ್, ಕುಪೇಂದ್ರರಡ್ಡಿ, ರಾಜಿವ್ ಗೌಡ ನಿವೃತ್ತಿ ಹೊಂದಲಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಹೀಗಾಗಿ ಈಗಾಗಲೇ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಮೂರು ಪಕ್ಷಗಳಲ್ಲಿ ಆಕಾಂಕ್ಷಿಗಳು ಲಾಭಿ ನಡೆಸಿದ್ದಾರೆ. ಸದ್ಯ ಸದಸ್ಯ ಬಲ ಹೆಚ್ಚಿರುವ ಬಿಜೆಪಿಯಲ್ಲಿ ಮಾತ್ರ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಆದರೆ ಕಾಂಗ್ರೆಸ್ ನಲ್ಲೂ ಕೂಡ ಆಕಾಂಕ್ಷಿಗಳು ಇದ್ದಾಗ್ಯೂ ಮಲ್ಲಿಕಾರ್ಜುನ ಖರ್ಗೆ ಹೆಸರೆ ಅಂತಿಮವಾಗುವ ಸಾಧ್ಯತೆ ಹೆಚ್ಚಿದೆ.   

Leave a Reply

Your email address will not be published. Required fields are marked *

You May Also Like

ಮಹಿಳಾ ನರ್ಸ್ ಚಿಕಿತ್ಸೆ ನೀಡುವಂತೆ ಆಸ್ಪತ್ರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಯುವಕರು

ಅಪಘಾತದಲ್ಲಿ ತಮಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಆಗಮಿಸಿದ ಇಬ್ಬರು ನಮಗೆ ಮಹಿಳಾ ನರ್ಸ್ ಚಿಕಿತ್ಸೆ ನಿಡಬೇಕು ಎಂದು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ.

ನಂಬಿದ್ರ ನಂಬ್ರಿ-ಬಿಟ್ರಬಿಡ್ರಿ: 66 ವರ್ಷದ ಹೆಣ್ಮಗಳಿಗೆ 18 ತಿಂಗಳದಾಗ 8 ಮಕ್ಕಳು ಹುಟ್ಟ್ಯಾವು!

ಸತ್ತವ್ರು ಬದಕಿದ್ದು, ಬದುಕಿದವರು ಸತ್ತಿದ್ದು ಇಂಥ ಅದೆಷ್ಟ್ ಘಟನಾ ನಾವು ಕೇಳಿವಿ, ನೋಡಿವಿ. ಆದ್ರ ಎಂತೆಂಥ ಚಿತ್ರ-ವಿಚಿತ್ರ ಘಟನೆನಾ ನಾವು ಕೇಳಿವಿ, ನೋಡಿವಿ. ಆದ್ರ ಈ ಘಟನಾ ಮಾತ್ರ ನಾವು ಎಂದು ಕಾಣದ್ದು, ಕೇಳದ್ದು ಅಂದ್ರು ತಪ್ಪಾಗ್ಲಿಕ್ಕಿಲ್ಲ.

ಸಾಲಕ್ಕೆ ಹೆದರಿ ನೇಣಿಗೆ ಶರಣಾದ..!

ಉತ್ತರಪ್ರಭ ಸುದ್ದಿ ಕೊಪ್ಪಳ: ತಾಲೂಕಿನ ಲೆಬಗೇರಿ ಗ್ರಾಮದ ನಾಗರಾಜ (೩೫) ಜಡಿಯಪ್ಪ ಚಿಲವಾಡಗಿ ಎಂಬಾತನು ಬ್ಯಾಂಕ್…