ಬೆಂಗಳೂರು: ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.

ಜೂ.9ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂ.10ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್ 12 ರಂದು ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಪ್ರಭಾಕರ ಕೋರೆ, ಬಿ.ಕೆ.ಹರಿಪ್ರಸಾದ್, ಕುಪೇಂದ್ರರಡ್ಡಿ, ರಾಜಿವ್ ಗೌಡ ನಿವೃತ್ತಿ ಹೊಂದಲಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಹೀಗಾಗಿ ಈಗಾಗಲೇ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಮೂರು ಪಕ್ಷಗಳಲ್ಲಿ ಆಕಾಂಕ್ಷಿಗಳು ಲಾಭಿ ನಡೆಸಿದ್ದಾರೆ. ಸದ್ಯ ಸದಸ್ಯ ಬಲ ಹೆಚ್ಚಿರುವ ಬಿಜೆಪಿಯಲ್ಲಿ ಮಾತ್ರ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಆದರೆ ಕಾಂಗ್ರೆಸ್ ನಲ್ಲೂ ಕೂಡ ಆಕಾಂಕ್ಷಿಗಳು ಇದ್ದಾಗ್ಯೂ ಮಲ್ಲಿಕಾರ್ಜುನ ಖರ್ಗೆ ಹೆಸರೆ ಅಂತಿಮವಾಗುವ ಸಾಧ್ಯತೆ ಹೆಚ್ಚಿದೆ.   

Leave a Reply

Your email address will not be published. Required fields are marked *

You May Also Like

ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂ.ಎಚ್.ಒ) ಕೋವಿಡ್-19 ನಿಯಂತ್ರಿಸಲು ಹಲವಾರು ಮಾರ್ಗಸೂಚಿ, ಸಲಹೆಗಳನ್ನು ರೂಪಿಸಿದೆ.

ಕೈಗಳು ವಿವಿಧ ಮೇಲ್ಮೈಗಳನ್ನು ಆಗಾಗ ಸ್ಪರ್ಶಿಸುವುದರಿಂದ ಮುಂಗೈಯನ್ನು ಸ್ವಚ್ಛಗೊಳಿಸುವುದು ಮುಖ್ಯ. ಇದಕ್ಕಾಗಿ ಆಲ್ಕೊಹಾಲ್ ಆಧರಿತ ಸ್ಯಾನಿಟೈಸರ್ ಬಳಕೆ ಮಾಡಬೇಕು. ಆದರೆ ನೀರು ಮತ್ತು ಸೋಪ್

ಎಬಿವಿಪಿಯಿಂದ ಕಾಲೇಜು ಕಟ್ಟಡದ ದುರಸ್ತಿಗಾಗಿ ಪ್ರತಿಭಟನೆ.

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು…

ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿ

ಬೆಂಗಳೂರು : ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿಗೊಳಿಸಲು…

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ: ಸಚಿವ ಶೆಟ್ಟರ್

ವಿಧಾನ ಸಭೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಪರಿಷತ್‌ನಲ್ಲಿ ಬಿಜೆಪಿಗೆ ಬಹುಮತವಿಲ್ಲ. ಸರ್ಕಾರ ಸುಸೂತ್ರವಾಗಿ ನಡೆಯಲು ಎರಡು ಕಡೆ ಬಹುಮತ ಅಗತ್ಯ. ಪರಿಷತ್‌ನ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.