ಬೆಂಗಳೂರು: ನಟ ಶಿವಣ್ಣ ಮತ್ತೊಂದು ಸಿನಿಮಾಗೆ ಕೈ ಹಾಕಿದ್ದಾರೆ. ಅಲ್ಲದೇ, ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಸದ್ಯ ಶಿವರಾಜ್ ಕುಮಾರ್ ಅವರು ಇಂದ್ರಸೇನ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಚಿತ್ರವನ್ನು ಮುರಳಿ ಮೋಹನ್ ನಿರ್ದೇಶಿಸಿದ್ದಾರೆ. ಇಂದ್ರಸೇನ ಚಿತ್ರದ ಮೂಲಕ ಮುರಳಿ ಮೋಹನ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ.
ಈ ಹಿಂದೆ ನಿರ್ದೇಶಕ ಮುರಳಿ ಮೋಹನ್ ಅವರು, ನಾಗರಹಾವು, ಸಂತ ಸೇರಿದಂತೆ ಕೆಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಆ ನಂತರ ನಿರ್ದೇಶನದಿಂದ ದೂರ ಉಳಿದಿದ್ದರು. ಸದ್ಯ ಇಂದ್ರಸೇನಾ ಚಿತ್ರದ ಮೂಲಕ ಮರಳಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.

ಒಂದಷ್ಟು ನೈಜ ಅಂಶಗಳನ್ನಿಟ್ಟುಕೊಂಡು ಚಿತ್ರ ರೂಪಿಸಲಾಗಿದೆ. ಶತ್ರುಗಳು ಹೊರಗಿಲ್ಲ, ಒಳಗೆಯೇ ಇದ್ದಾರೆ. ಹೊರಗಿನ ಶತ್ರುಗಳಿಗಿಂತ ನಮ್ಮ ಬೆನ್ನ ಹಿಂದೆ ಇರುವ ಶತ್ರುಗಳು ತುಂಬಾ ಅಪಾಯಕಾರಿ. ಈ ಹಿಂದೆ ನಾವು ಬ್ರಿಟಿಷರ ವಿರುದ್ಧ ಹೋರಾಡಬೇಕಾಗಿತ್ತು. ಆ ನಂತರ ನಮ್ಮೊಳಗಿನ ಶತ್ರುಗಳ ಜೊತೆಯೇ ಹೋರಾಡುವಂತಾಯಿತು ಎಂಬುವುದು ಚಿತ್ರದ ತಿರುಳಾಗಿದೆ.

Leave a Reply

Your email address will not be published. Required fields are marked *

You May Also Like

ಮಾದಕ ನಟಿ ಸನ್ನಿ ವಿಚಾರಣೆಗೊಳಪಡಿಸಿದ ಪೊಲೀಸರು!

ತಿರುವನಂತಪುರಂ : ಮಾದಕ ನಟಿ ಸನ್ನಿ ಲಿಯೋನ್ ಅವರನ್ನು ಕೇರಳ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಟ್ವೀಟರ್ ನಟ ರಜನಿಕಾಂತ ಟ್ವೀಟ್ ಅಳಿಸಿ ಹಾಕಿದ್ದು ಯಾಕೆ?

ಖ್ಯಾತ ನಟ ರಜನಿಕಾಂತ್ ಮಾಡಿದ ಟ್ವೀಟ್ ನ್ನು ಸ್ವತಃ ಟ್ವೀಕರ್ ಅಳಿಸಿ ಹಾಕಿದೆ. ಅವರ ಟ್ವೀಟ್ ಜಾಗದಲ್ಲೀಗ ಟ್ವೀಟರ್ ನಿಯಮ ಉಲ್ಲಂಘಿಸಿರುವುದರಿಂದ ಈ ಟ್ವೀಟ್ ಲಭ್ಯವಿಲ್ಲ ಎಂದು ಸೂಚಿಸಿದೆ. ಟ್ವೀಟ್ ಅಳಿಸಿ ಹಾಕಲಿ ಕಾರಣ ಏನು ಗೊತ್ತೆ?

ಕನ್ನಡ ಚಿತ್ರ ರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ ನಿಧನ!

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈಗಿನಿಂದಲೇ ಹೊಸ ಗೆಟಪ್ ನಲ್ಲಿ ಬರಲು ತಯಾರಾಗುತ್ತಿದ್ದಾರೆ ಸುದೀಪ್!

ಲಾಕ್ ಡೌನ್ ಅವಧಿಯಲ್ಲಿ ಫ್ಯಾಂಟಮ್ ಕೆಲಸದಲ್ಲಿ ಸುದೀಪ್ ತೊಡಗಿಸಿಕೊಂಡಿದ್ದಾರೆ. ತಮ್ಮ ಮುಂದಿನ ಕಮರ್ಷಿಯಲ್ ಆಕ್ಷನ್ ಮೂವಿಗಾಗಿ ಹೊಸ ಗೆಟಪ್ ಪಡೆದಿದ್ದಾರೆ.