ಬೆಂಗಳೂರು: ನಟ ಶಿವಣ್ಣ ಮತ್ತೊಂದು ಸಿನಿಮಾಗೆ ಕೈ ಹಾಕಿದ್ದಾರೆ. ಅಲ್ಲದೇ, ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಸದ್ಯ ಶಿವರಾಜ್ ಕುಮಾರ್ ಅವರು ಇಂದ್ರಸೇನ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಚಿತ್ರವನ್ನು ಮುರಳಿ ಮೋಹನ್ ನಿರ್ದೇಶಿಸಿದ್ದಾರೆ. ಇಂದ್ರಸೇನ ಚಿತ್ರದ ಮೂಲಕ ಮುರಳಿ ಮೋಹನ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ.
ಈ ಹಿಂದೆ ನಿರ್ದೇಶಕ ಮುರಳಿ ಮೋಹನ್ ಅವರು, ನಾಗರಹಾವು, ಸಂತ ಸೇರಿದಂತೆ ಕೆಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಆ ನಂತರ ನಿರ್ದೇಶನದಿಂದ ದೂರ ಉಳಿದಿದ್ದರು. ಸದ್ಯ ಇಂದ್ರಸೇನಾ ಚಿತ್ರದ ಮೂಲಕ ಮರಳಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.

ಒಂದಷ್ಟು ನೈಜ ಅಂಶಗಳನ್ನಿಟ್ಟುಕೊಂಡು ಚಿತ್ರ ರೂಪಿಸಲಾಗಿದೆ. ಶತ್ರುಗಳು ಹೊರಗಿಲ್ಲ, ಒಳಗೆಯೇ ಇದ್ದಾರೆ. ಹೊರಗಿನ ಶತ್ರುಗಳಿಗಿಂತ ನಮ್ಮ ಬೆನ್ನ ಹಿಂದೆ ಇರುವ ಶತ್ರುಗಳು ತುಂಬಾ ಅಪಾಯಕಾರಿ. ಈ ಹಿಂದೆ ನಾವು ಬ್ರಿಟಿಷರ ವಿರುದ್ಧ ಹೋರಾಡಬೇಕಾಗಿತ್ತು. ಆ ನಂತರ ನಮ್ಮೊಳಗಿನ ಶತ್ರುಗಳ ಜೊತೆಯೇ ಹೋರಾಡುವಂತಾಯಿತು ಎಂಬುವುದು ಚಿತ್ರದ ತಿರುಳಾಗಿದೆ.

Leave a Reply

Your email address will not be published. Required fields are marked *

You May Also Like

ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಫುಲ್ ಗರಂ

ಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ನಿರೂಪಕಿ ಅನುಶ್ರೀ ವಿರುದ್ಧ ಸಿಸಿಬಿ ಅಧಿಕಾರಿಗಳು ಗರಂ ಆಗಿದ್ದಾರೆ.

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.

ಟಾಲಿವುಡ್ ನ ಈ ಪ್ರಿನ್ಸ್ ಗಳಿಗೆ ಇಂದು ಸುದಿನವಂತೆ! ಏಕೆ ಗೊತ್ತಾ?

ಹೈದರಾಬಾದ್ : ನಟ ಮಹೇಶ್ ಬಾಬು ಹಾಗೂ ಸ್ವೀಟಿ ಅನುಷ್ಕಾ ಶೆಟ್ಟಿ ಅವರಿಗೆ ಇಂದು ವಿಶೇಷ ದಿನವಂತೆ. ಈ ನಿಟ್ಟಿನಲ್ಲಿ ಇಬ್ಬರೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ.