ಬೆಂಗಳೂರು: ನಟ ಶಿವಣ್ಣ ಮತ್ತೊಂದು ಸಿನಿಮಾಗೆ ಕೈ ಹಾಕಿದ್ದಾರೆ. ಅಲ್ಲದೇ, ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಸದ್ಯ ಶಿವರಾಜ್ ಕುಮಾರ್ ಅವರು ಇಂದ್ರಸೇನ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಚಿತ್ರವನ್ನು ಮುರಳಿ ಮೋಹನ್ ನಿರ್ದೇಶಿಸಿದ್ದಾರೆ. ಇಂದ್ರಸೇನ ಚಿತ್ರದ ಮೂಲಕ ಮುರಳಿ ಮೋಹನ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ.
ಈ ಹಿಂದೆ ನಿರ್ದೇಶಕ ಮುರಳಿ ಮೋಹನ್ ಅವರು, ನಾಗರಹಾವು, ಸಂತ ಸೇರಿದಂತೆ ಕೆಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಆ ನಂತರ ನಿರ್ದೇಶನದಿಂದ ದೂರ ಉಳಿದಿದ್ದರು. ಸದ್ಯ ಇಂದ್ರಸೇನಾ ಚಿತ್ರದ ಮೂಲಕ ಮರಳಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.

ಒಂದಷ್ಟು ನೈಜ ಅಂಶಗಳನ್ನಿಟ್ಟುಕೊಂಡು ಚಿತ್ರ ರೂಪಿಸಲಾಗಿದೆ. ಶತ್ರುಗಳು ಹೊರಗಿಲ್ಲ, ಒಳಗೆಯೇ ಇದ್ದಾರೆ. ಹೊರಗಿನ ಶತ್ರುಗಳಿಗಿಂತ ನಮ್ಮ ಬೆನ್ನ ಹಿಂದೆ ಇರುವ ಶತ್ರುಗಳು ತುಂಬಾ ಅಪಾಯಕಾರಿ. ಈ ಹಿಂದೆ ನಾವು ಬ್ರಿಟಿಷರ ವಿರುದ್ಧ ಹೋರಾಡಬೇಕಾಗಿತ್ತು. ಆ ನಂತರ ನಮ್ಮೊಳಗಿನ ಶತ್ರುಗಳ ಜೊತೆಯೇ ಹೋರಾಡುವಂತಾಯಿತು ಎಂಬುವುದು ಚಿತ್ರದ ತಿರುಳಾಗಿದೆ.

Leave a Reply

Your email address will not be published. Required fields are marked *

You May Also Like

ಕನ್ನಡ ಚಿತ್ರ ರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ ನಿಧನ!

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಭಜರಂಗಿ-2 ಟೀಸರ್: ಅಭಿಮಾನಿಗಳು ಫುಲ್ ಖುಷ್

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 58ನೇ ಹುಟ್ಟು ಹಬ್ಬದ ಅಂಗವಾಗಿ ಭಜರಂಗಿ 2 ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಸದ್ಯ ಟೀಸರ್ ಬಗ್ಗೆ ಅಭಿಮಾನಿಗಳು ಫುಲ್ ಖುಷಿ ಪಡುತ್ತಿದ್ದಾರೆ.

ನಟ ಶಾರೂಖ್ ಖಾನ್ ಹಾಡಿರುವ ಕ್ವಾರಂಟೈನ್ ಹಾಡು ಹೇಗಿದೆ ನೀವೂ ಕೇಳಿ

ಮೊದಲ ಬಾರಿಗೆ ಹಾಡೊಂದಕ್ಕೆ ಬಾಲಿವುಡ್ ನಟ ಶಾರೂಕ್ ಖಾನ್ ಧ್ವನಿಗೂಡಿಸಿದರೆ ಅವರ ಮಗ ನಟಿಸಿದ್ದಾರೆ. ಕ್ವಾರೈಂಟೇನ್ ಹಾಡೊಂದಕ್ಕೆ ಶಾರೂಕ್ ನೀಡಿದ ಧ್ವನಿ ಹೇಗಿದೆ ಮೋಡಿ.

ನನ್ನ ಮನೆಯನ್ನು ದೇವರೇ ಕಾಪಾಡಬೇಕೆಂದು ನಟ ರವಿಶಂಕರ್ ಹೇಳಿದ್ಯಾಕೆ..?

ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.…