ಬೆಂಗಳೂರು: ನಟ ಶಿವಣ್ಣ ಮತ್ತೊಂದು ಸಿನಿಮಾಗೆ ಕೈ ಹಾಕಿದ್ದಾರೆ. ಅಲ್ಲದೇ, ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಸದ್ಯ ಶಿವರಾಜ್ ಕುಮಾರ್ ಅವರು ಇಂದ್ರಸೇನ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಚಿತ್ರವನ್ನು ಮುರಳಿ ಮೋಹನ್ ನಿರ್ದೇಶಿಸಿದ್ದಾರೆ. ಇಂದ್ರಸೇನ ಚಿತ್ರದ ಮೂಲಕ ಮುರಳಿ ಮೋಹನ್ ಮತ್ತೆ ನಿರ್ದೇಶನಕ್ಕೆ ಮರಳುತ್ತಿದ್ದಾರೆ.
ಈ ಹಿಂದೆ ನಿರ್ದೇಶಕ ಮುರಳಿ ಮೋಹನ್ ಅವರು, ನಾಗರಹಾವು, ಸಂತ ಸೇರಿದಂತೆ ಕೆಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಆ ನಂತರ ನಿರ್ದೇಶನದಿಂದ ದೂರ ಉಳಿದಿದ್ದರು. ಸದ್ಯ ಇಂದ್ರಸೇನಾ ಚಿತ್ರದ ಮೂಲಕ ಮರಳಿ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ.

ಒಂದಷ್ಟು ನೈಜ ಅಂಶಗಳನ್ನಿಟ್ಟುಕೊಂಡು ಚಿತ್ರ ರೂಪಿಸಲಾಗಿದೆ. ಶತ್ರುಗಳು ಹೊರಗಿಲ್ಲ, ಒಳಗೆಯೇ ಇದ್ದಾರೆ. ಹೊರಗಿನ ಶತ್ರುಗಳಿಗಿಂತ ನಮ್ಮ ಬೆನ್ನ ಹಿಂದೆ ಇರುವ ಶತ್ರುಗಳು ತುಂಬಾ ಅಪಾಯಕಾರಿ. ಈ ಹಿಂದೆ ನಾವು ಬ್ರಿಟಿಷರ ವಿರುದ್ಧ ಹೋರಾಡಬೇಕಾಗಿತ್ತು. ಆ ನಂತರ ನಮ್ಮೊಳಗಿನ ಶತ್ರುಗಳ ಜೊತೆಯೇ ಹೋರಾಡುವಂತಾಯಿತು ಎಂಬುವುದು ಚಿತ್ರದ ತಿರುಳಾಗಿದೆ.

Leave a Reply

Your email address will not be published. Required fields are marked *

You May Also Like

ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟಿ ಸಂಜನಾ!

ಬೆಂಗಳೂರು : ಡ್ರಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ಸಂಜನಾ ಅವರು, ಜಾಮೀನಿಗಾಗಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಒಳ್ಳೆ ಕಥೆ ಸಿಕ್ರೆ ಶಿವಣ್ಣ-ಪುನಿತ್ ಬೆಳ್ಳಿ ತೆರೆಮೇಲೆ ಒಟ್ಟಿಗೆ ಕಾಣಿಸಿಕೊಳ್ತಾರಂತೆ

ಪುನೀತ್ ರಾಜ್‌ಕುಮಾರ್ ಜೊತೆ ಸಿನಿಮಾ ಯಾವಾಗ? ಎಂದು ಕೆಲವರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಶಿವರಾಜಕುಮಾರ್, ನೂರಕ್ಕೆ ನೂರು ನಾನು ಮತ್ತು ಪುನೀತ್ ರಾಜ್‌ಕುಮಾರ್ ಒಟ್ಟಿಗೆ ಸಿನಿಮಾ ಮಾಡ್ತೀವಿ ಅಂದ್ರು ಶಿವಣ್ಣ..

ಹ್ಯಾಪಿ ಬರ್ತಡೇ ಮೆಘಾಸ್ಟಾರ್

ಮೆಗಾಸ್ಟಾರ್ ಚಿರಂಜೀವಿ ಅವರ ಹುಟ್ಟು ಹಬ್ಬವಿಂದು. ಹೀಗಾಗಿ ಸೆಲೆಬ್ರಿಟಿಗಳು ಹಾಗೂ ನಾಯಕರು, ಅಭಿಮಾನಿಗಳು ಖುಷಿಯಿಂದ ಶುಭಾಶಯ ತಿಳಿಸುತ್ತಿದ್ದಾರೆ. ಅವರ ಹುಟ್ಟು ಹಬ್ಬದ ಅಂಗವಾಗಿ ಚಿರು ಅವರು ಕಾಮನ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಈ ಟೀಸರ್ ಶೇರ್ ಮಾಡಿರುವ ಕನ್ನಡ ನಟ ಕಿಚ್ಚ ಸುದೀಪ್ ಮತ್ತು ಸಂಸದೆ ಸುಮಲತಾ ಅವರು ತೆಲುಗು ಚಿರಂಜೀವಿಗೆ ವಿಶ್ ಮಾಡಿದ್ದಾರೆ.

ಬಸವ ಜಯಂತಿ ವಿಶೇಷ | ಕನ್ನಡ ಸಿನಿಮಾಗಳಲ್ಲಿ ಬಸವಣ್ಣ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ