ಮುಂಡರಗಿ: ಇತ್ತಿಚೆಗಷ್ಟೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಗದಗ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಮೇ.26 ರಂದು ಇಲ್ಲಿನ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ವೇಳೆ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ನೀಲಪ್ಪ ದೊಡ್ಡಮನಿ, ಆಯ್ಕೆಯಾಗಿದ್ದರು.

ಅಧ್ಯಕ್ಷರ ಆಯ್ಕೆ ಪ್ರಕ್ರಿಯೇ ಪ್ರಶ್ನಿಸಿ ಈ ಹಿಂದಿನ ಅವಧಿಗೆ ಎಪಿಎಂಸಿ ಅಧ್ಯಕ್ಷರಾಗಿದ್ದ ಶಿವಕುಮಾರಗೌಡ ಪಾಟೀಲ್ ಜಿಲ್ಲಾ ನ್ಯಾಯಾಲಯದಲ್ಲಿ ಅಧ್ಯಕ್ಷರ ಆಯ್ಕೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು, ಅರ್ಜಿ ಪುರಸ್ಕರಿಸಿದ ಜಿಲ್ಲಾ ನ್ಯಾಯಾಲಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೇಗೆ ತಡೆಯಾಜ್ಞೆ ನೀಡಿದೆ.

ಕೃಷಿ ಉತ್ಪನ್ನ ಮಾರಾಟ ಅಭಿವೃದ್ಧಿ ಆಕ್ಟ್ 1966 ಪ್ರಕಾರ ಅರ್ಜಿ ಪುರಸ್ಕೃತವಾಗಿದ್ದು, ರವೀಂದ್ರ ಉಪ್ಪಿನಬೆಟಗೇರಿ ಅವರ ಆಯ್ಕೆ ಮತ್ತು ಆಯ್ಕೆ ಪ್ರಕ್ರಿಯೇಗಳಿಗೆ ಮುಂದಿನ ಆದೇಶದವರೆಗೆ ತಡೆಯಾಜ್ಞೆ ನೀಡಿದೆ.

Leave a Reply

Your email address will not be published. Required fields are marked *

You May Also Like

ಪಕ್ಷೇತರ ಅಬ್ಯರ್ಥಿಗೆ ಸಿಪಿಐಎಂ ಬೆಂಬಲ

ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರನ್ನು ಸಿಪಿಐಎಂ ಪಕ್ಷ ಬೆಂಬಲಿಸಲಿದೆ ಎಂದು ಸಿಪಿಐಎಂ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ 21 ಕೊರೋನಾ ಪಾಸಿಟಿವ್: ರಾಜ್ಯದಲ್ಲಿ 642ಕ್ಕೆ ಏರಿಕೆ

ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗುತ್ತಿದೆ.

ವಿಶ್ವ ಜಾನಪದ ದಿನ ಆಚರಣೆ: ಜಾನಪದ ಸಂರಕ್ಷಣೆ ಹಾಗೂ ಸಂವರ್ಧನೆ ಅಗತ್ಯ.

ಬೀದರ: ಜಾನಪದ ಜನ ಕೇಂದ್ರಿತ ಮೌಲ್ಯಗಳ ನಿದಿಯಾಗಿದ್ದು ಇದನ್ನು ಬಗೆದಷ್ಟು ದೇಶಿಯತೆ ಅನಾವರಣಗೊಳ್ಳುವುದು ಎಂದು ಕರ್ನಾಟಕ…

ವೈಯಕ್ತಿಕ ಸೌಂದರ್ಯ ವರ್ಧಕಕ್ಕೆ ಹೊಸ ಬ್ರ್ಯಾಂಡ್ ಬಿಡುಗಡೆ ಮಾಡಿದ ಸಲ್ಮಾನ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ FRSH ಹೆಸರಿನ ವೈಯಕ್ತಿಕ ಸೌಂದರ್ಯ ಬ್ರಾಂಡ್ ಬಿಡುಗಡೆ ಮಾಡಿದ್ದಾರೆ. ವೈಯಕ್ತಿಕ ಉಡುಪು, ದೇಹದಾರ್ಡ್ಯ ಸಲಕರಣೆ, ಜಿಮ್ ಮತ್ತು ಈ-ಸೈಕಲ್ ಬಿಡುಗಡೆಯ ನಂತರ ಇದೀಗ ಹೊಸ ಬ್ರಾಂಡ್ ಪರಿಚಯಿಸಿದ್ದಾರೆ.