ಮುಂಡರಗಿ: ಇತ್ತಿಚೆಗಷ್ಟೆ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಗದಗ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಮೇ.26 ರಂದು ಇಲ್ಲಿನ ಎಪಿಎಂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಈ ವೇಳೆ ರವೀಂದ್ರ ಉಪ್ಪಿನಬೆಟಗೇರಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ನೀಲಪ್ಪ ದೊಡ್ಡಮನಿ, ಆಯ್ಕೆಯಾಗಿದ್ದರು.

ಅಧ್ಯಕ್ಷರ ಆಯ್ಕೆ ಪ್ರಕ್ರಿಯೇ ಪ್ರಶ್ನಿಸಿ ಈ ಹಿಂದಿನ ಅವಧಿಗೆ ಎಪಿಎಂಸಿ ಅಧ್ಯಕ್ಷರಾಗಿದ್ದ ಶಿವಕುಮಾರಗೌಡ ಪಾಟೀಲ್ ಜಿಲ್ಲಾ ನ್ಯಾಯಾಲಯದಲ್ಲಿ ಅಧ್ಯಕ್ಷರ ಆಯ್ಕೆ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು, ಅರ್ಜಿ ಪುರಸ್ಕರಿಸಿದ ಜಿಲ್ಲಾ ನ್ಯಾಯಾಲಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೇಗೆ ತಡೆಯಾಜ್ಞೆ ನೀಡಿದೆ.

ಕೃಷಿ ಉತ್ಪನ್ನ ಮಾರಾಟ ಅಭಿವೃದ್ಧಿ ಆಕ್ಟ್ 1966 ಪ್ರಕಾರ ಅರ್ಜಿ ಪುರಸ್ಕೃತವಾಗಿದ್ದು, ರವೀಂದ್ರ ಉಪ್ಪಿನಬೆಟಗೇರಿ ಅವರ ಆಯ್ಕೆ ಮತ್ತು ಆಯ್ಕೆ ಪ್ರಕ್ರಿಯೇಗಳಿಗೆ ಮುಂದಿನ ಆದೇಶದವರೆಗೆ ತಡೆಯಾಜ್ಞೆ ನೀಡಿದೆ.

Leave a Reply

Your email address will not be published. Required fields are marked *

You May Also Like

ಕಳ್ಳತನ ಪ್ರಕರಣ ಇಬ್ಬರ ಬಂಧನ.

ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ವಿದ್ಯುತ್ ಬಿಲ್ ಏರಿಸಿ ಗ್ರಾಹಕರಿಗೆ ಶಾಕ್ ನೀಡಿದ ಸರ್ಕಾರ!

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…

ನೆಲೋಗಿ ಠಾಣೆ ಪೊಲೀಸರ ಭರ್ಜರಿ ಬೇಟೆ 41.8 ಕೆಜಿ ಗಾಂಜಾ ಜಪ್ತಿ

ಉತ್ತರಪ್ರಭ ನೆಲೋಗಿ: ರಾಷ್ಟೀಯ ಹೆದ್ದಾರಿ 50ರ ಕಲಬುರ್ಗಿಯಿಂದ ವಿಜಯಪುರಕ್ಕೆ ಮಾರ್ಗಮಧ್ಯದಲ್ಲಿ  ನೆಲೋಗಿ ಕಮಾನ್ ಬಸ್ ನಿಲ್ದಾಣದ…