ಬೆಂಗಳೂರು: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ. ಇದರ ಜೊತೆಗೆ ಅವರು ಆರ್ಥಿಕವಾಗಿ ಸದೃಢರಾಗಲು ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಇಲಾಖೆ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸಹಕಾರ ಇಲಾಖೆಯ ರಿಜಿಸ್ಟಾರ್ ಗೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರಿಗಾಗಿ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ.

ಸರ್ಕಾರದ ಆದೇಶ ಪ್ರತಿ

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 40,000ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ನೈತಿಕವಾಗಿ ಆತ್ಮಸ್ಥೈರ್ಯ ತುಂಬಲು ಹಾಗೂ ಆರ್ಥಿಕ ಸದೃಢತೆ ಹೊಂದಲು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವ ಸಲುವಾಗಿ, ಆಯಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಈ ಬಗ್ಗೆ ಅರಿವು ಮೂಡಿಸಿ, ಅವರುಗಳಿಗೆ ಆರ್ಥಿಕವಾಗಿ ಸಬಲತೆ ಹೊಂದಲು, ಪ್ರತಿಜಿಲ್ಲೆಯಲ್ಲಿಯೂ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಂಬಂಧಪಟ್ಟ ಪ್ರಾಂತೀಯ ಜಂಟಿ ನಿಬಂಧಕರು, ಉಪನಿಬಂಧಕರು ಹಾಗೂ ಸಹಾಯಕ ನಿಬಂಧಕರುಗಳಿಗೆ ನಿರ್ದೇಶನ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ಕೈಗೊಂಡಕ್ರಮದ ಬಗ್ಗೆ 15 ದಿನಗಳೊಳಗಾಗಿ ಈ ಕಛೇರಿಗೆ ವರದಿ ಸಲ್ಲಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಕೊರೊನಾ ಸಂಕಷ್ಟ ಪರಿಹಾರಕ್ಕೆ ಸಿರಿವಂತರ ಮೇಲೆ ತೆರಿಗೆ ವಿಧಿಸಿ

ಬೆಂಗಳೂರು: ಸಾಹಿತಿ, ಕಲಾವಿದರು, ಜನಪರ ಹೋರಾಟಗಾರರು ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಸಿರಿವಂತರ ಮೇಲೆ ಹೆಚ್ಚಿನ ತೆರಿಗೆ…

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ನಿಗದಿ: ಎರಡು ಹಂತದಲ್ಲಿ ಚುನಾವಣೆ

ರಾಜ್ಯದಲ್ಲಿ ಈಗಾಗಲೇ ಹಳ್ಳಿ ಫೈಟ್ ಗೆ ದಿನಾಂಕ ಯಾವಾಗ ಎನ್ನುವ ಕುತೂಹಲ ಬಹುತೇಕರಲ್ಲಿತ್ತು. ಆದರೆ ಇಂದು ಕೊನೆಗೂ ಚುನಾವಣಾ ಆಯೋಗ ಮೂಹುರ್ತ ಫಿಕ್ಸ್ ಮಾಡಿದ್ದು, ಚುನಾವಣೆ ದಿನಾಂಕಕ್ಕೆ ಎದುರು ನೋಡುತ್ತಿದ್ದವರ ಸಂತಸಕ್ಕೆ ಕಾರಣವಾಗಿದೆ